Webdunia - Bharat's app for daily news and videos

Install App

ರಾಮಾರ್ಜುನ ಸಿನಿಮಾ ಅನ್ಯಾಯಕ್ಕೆ ಧ್ವನಿಗೂಡಿಸಿದ ಸ್ಯಾಂಡಲ್ ವುಡ್

Webdunia
ಶನಿವಾರ, 6 ಫೆಬ್ರವರಿ 2021 (08:55 IST)
ಬೆಂಗಳೂರು: ರಾಮಾರ್ಜುನ ಸಿನಿಮಾ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಥಿಯೇಟರ್ ನಿಂದ ಎತ್ತಂಗಡಿ ಮಾಡಿದ್ದು ನಿರ್ದೇಶಕ, ನಟ ಅನೀಶ್ ಬೇಸರಕ್ಕೆ ಕಾರಣವಾಗಿದೆ. ಹೊಸಬರ ಚಿತ್ರಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಈಗ ನಟ ರಕ್ಷಿತ್ ಶೆಟ್ಟಿ, ಡಾರ್ಲಿಂಗ್ ಕೃಷ್ಣ ಮುಂತಾದವರು ಬೆನ್ನುಲುಬಾಗಿ ನಿಂತಿದ್ದಾರೆ.


ಹೊಸಬರು ಚಿತ್ರರಂಗಕ್ಕೆ ಹೊಸ ನಿರೀಕ್ಷೆಯೊಂದಿಗೆ ಹೆಜ್ಜೆ ಹಾಕುತ್ತಾರೆ. ಆದರೆ ಅವರ ಶ್ರಮವನ್ನು ಆರಂಭದಲ್ಲೇ ಚಿವುಟಿ ಹಾಕಿದರೆ ಚಿತ್ರರಂಗದಲ್ಲಿ ಬೆಳೆಯುವುದು ಕಷ್ಟವಾಗುತ್ತದೆ. ಇಂತಹವರಿಗೆ ನಾವು ಶಕ್ತಿಯಾಗಬೇಕು, ಸ್ಪೂರ್ತಿಯಾಗಬೇಕು ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. ಧ್ರುವ ಸರ್ಜಾ ಕೂಡಾ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ಈ ಸಿನಿಮಾ ಪ್ರೋತ್ಸಾಹಿಸುವಂತೆ ಮನವಿ ಮಾಡಿದ್ದಾರೆ. ಈ ಮೊದಲು ಡಾರ್ಲಿಂಗ್ ಕೃಷ್ಣ ಕೂಡಾ ಇದೇ ಸಮಸ್ಯೆ ಎದುರಿಸಿದ್ದರು. ಲವ್ ಮಾಕ್ಟೇಲ್ ಸಿನಿಮಾವನ್ನೂ ಇದೇ ರೀತಿ ಎತ್ತಂಗಡಿ ಮಾಡಲಾಗಿತ್ತು. ಆದರೆ ಕಿಚ್ಚ ಸುದೀಪ್ ಸಹಾಯ ಆಗ ಕೃಷ್ಣಗೆ ಸಿಕ್ಕಿತ್ತು. ಮತ್ತೊಂದು ವಾರದಲ್ಲಿ ಲವ್ ಮಾಕ್ಟೇಲ್ ಭರ್ಜರಿ ರೆಸ್ಪಾನ್ಸ್ ಪಡೆದಿತ್ತು. ಹೀಗಾಗಿ ತಮ್ಮದೇ ಪರಿಸ್ಥಿತಿ ಎದುರಿಸುತ್ತಿರುವ ಅನೀಶ್ ಗೆ ಕೃಷ್ಣ ಬೆಂಬಲವಾಗಿ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments