Webdunia - Bharat's app for daily news and videos

Install App

ಯಾರೇ ಆದರೂ ಬಿಡಲ್ಲ: ದರ್ಶನ್ ಗುಡುಗು

Webdunia
ಭಾನುವಾರ, 11 ಜುಲೈ 2021 (19:41 IST)
ನನ್ನ ದಾಖಲೆಗಳನ್ನು ತಿರುಚಿರುವುದು ಗೊತ್ತಾಗಿದೆ. ನನಗೆ ಮೋಸ ಮಾಡಲು ಯತ್ನಿಸಿದ್ದು ಯಾರು ಅಂತ ಗೊತ್ತಾದರೆ ಅವರನ್ನು ಖಂಡಿತ ಬಿಡಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗುಡುಗಿದ್ದಾರೆ.
ತನ್ನ ಹೆಸರಿನಲ್ಲಿ ಕೋಟ್ಯಂತ ರೂಪಾಯಿ ವಂಚನೆಗೆ ಯತ್ನ ನಡೆದಿರುವ ಬಗ್ಎಗ ಮೈಸೂರಿನಲ್ಲಿ ಪೊಲೀಸ್ ಠಾಣೆಗೆ ಹಾಜರಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ನನಗೆ ಹೆಚ್ಚು ಏನೂ ಮಾಹಿತಿ ಇಲ್ಲ. ತನಿಖೆ ನಂತರ ಎಲ್ಲವನ್ನೂ ಹೇಳ್ತೀನಿ ಎಂದರು.
ನನ್ನ ದಾಖಲೆ ತಿರುಚಲಾಗಿದೆ ಎಂದು ಗೊತ್ತಾಗಿತ್ತು. ಒಂದು ತಿಂಗಳ ಹಿಂದೆ ನನ್ನ ಗಮನಕ್ಕೆ ಬಂತು. ಬ್ಯಾಂಕ್ ಮ್ಯಾನೇಜರ್ ಅನ್ನ ಯಾರು ಪರಿಚಯ ಮಾಡಿದರು? ಹೇಗೆ ಪರಿಚಯ ಮಾಡಿದರು ಅಂತ ಎಲ್ಲವೂ ವಿಚಾರಣೆ ಗೊತ್ತಾಗಲಿದೆ ಎಂದು ಅವರು ಹೇಳಿದರು.
ಆಯಮ್ಮ (ನಕಲಿ ಬ್ಯಾಂಕ್ ಮ್ಯಾನೇಜರ್) ಬಾಯಿ ಬಿಟ್ಟರೆ ಎಲ್ಲವೂ ಗೊತ್ತಾಗುತ್ತದೆ. ಪೊಲೀಸರು ತನಿಖೆಯಲ್ಲಿ ಬಾಯಿ  ಬಿಡಿಸ್ತಾರೆ. ತನಿಖೆ ವೇಳೆ ಮಾಹಿತಿ ಏನು ಬರುತ್ತೆ ಅನ್ನೋದು ಗೊತ್ತಿಲ್ಲ. ಇವತ್ತು ಪೊಲೀಸ್ ಬನ್ನಿ ಅಂತಾ ಕರೆದಿದ್ದರು ಬಂದಿದ್ದೇನೆ. ನಾನು ಕಥೆ ಹೇಳಿದ್ರೆ ಚೆನ್ನಾಗಿರಲ್ಲ. ಅವರು ಏನು ಹೇಳುತ್ತಾರೆ ಎಂಬುದರ ಮೇಲೆ ಎಲ್ಲವೂ ಗೊತ್ತಗುತ್ತೆ. ಸ್ನೇಹಿತರಿಂದಲೇ ಮೊಸ ಆಗಿದೆ ಅಂತಾ ಗೊತ್ತಾದರೇ. ಯಾರದರೂ ನಾನು ಬಿಡಲ್ಲ. ಅದು ಮಾತ್ರ ಗ್ಯಾರಂಟಿ ಎಂದು ದರ್ಶನ್ ಸ್ಪಷ್ಟಪಡಿಸಿದರು.
ಇದೇ ವೇಳೆ ಮಾತನಡಿದ ನಿರ್ಮಾಪಕ ಉಮಾಪತಿ, ಈ ಘಟನೆ ಬಗ್ಗೆ ನಮಗೆ ಒಂದು ತಿಂಗಳ ಹಿಂದೆಯೇ ಮಾಹಿತಿ ಬಂದಿತ್ತು. ಬೆಂಗಳೂರಿನ ಜಯನಗರ ಠಾಣೆಗೆ ದೂರು ನೀಡಿದ್ದೆವು. ಆದರೆ ಮೈಸೂರಿನಲ್ಲಿ ದೂರು ಕೊಟ್ಟರೆ ಒಳ್ಳೆಯದು ಎಂದು ಹೇಳಿದ್ದರಿಂದ ಇಲ್ಲಿ ದೂರು ನೀಡಿದ್ದೇವೆ. ತನಿಖೆ ಪೂರ್ಣಗೊಂಡ ನಂತರ ಎಲ್ಲವನ್ನೂ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments