Select Your Language

Notifications

webdunia
webdunia
webdunia
webdunia

ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿ: ಇನ್ನೆಷ್ಟು ದಿನ ಜೈಲು ವಾಸ ಇಲ್ಲಿದೆ ವಿವರ

Darshan Thoogudeepa

Krishnaveni K

ಬೆಂಗಳೂರು , ಬುಧವಾರ, 14 ಆಗಸ್ಟ್ 2024 (15:56 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಜೈಲೇ ಗತಿಯಾಗಿದೆ. ನ್ಯಾಯಾಧೀಶರು ಮತ್ತೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿದ್ದಾರೆ.

ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಆಗಸ್ಟ್ 28 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ. ಇಂದು ದರ್ಶನ್ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಗಿದಿತ್ತು. ಹೀಗಾಗಿ ಅವರನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಭದ್ರತಾ ದೃಷ್ಟಿಯಿಂದ ದರ್ಶನ್ ಮತ್ತು ಇತರರನ್ನು ನೇರವಾಗಿ ಕೋರ್ಟ್ ಗೆ ಹಾಜರುಪಡಿಸುತ್ತಿಲ್ಲ. ಬದಲಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕವೇ ಎಲ್ಲಾ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಎಲ್ಲಾ ಆರೋಪಿಗಳಿಗೂ ನ್ಯಾಯಾಂಗ ಬಂಧನ ಅವಧಿ ಮುಂದುವರಿಸಲು ಪೊಲೀಸರು ಮನವಿ ಮಾಡಿದರು. ಇದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದರು.

ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿನಲ್ಲಿರಿಸಲಾಗಿದೆ. ಅವರು ಈಗ ತಪ್ಪೊಪ್ಪಿಕೊಂಡು ಅಪ್ರೂವರ್ ಆಗಿ ಬದಲಾಗಿದ್ದಾರೆ. ದರ್ಶನ್ ಪ್ರಕರಣದಲ್ಲಿ ಪೊಲೀಸರು ಇನ್ನೂ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಹೀಗಾಗಿ ದರ್ಶನ್ ಪರ ವಕೀಲರು ಇನ್ನೂ ಜಾಮೀನಿಗೆ ಅರ್ಜಿ ಹಾಕಲು ಸಾಧ್ಯವಾಗಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್‌ಬಾಸ್‌ ಆರಂಭಕ್ಕೆ ದಿನಗಣನೆ: ದೊಡ್ಮನೆಗೆ ಎಂಟ್ರಿಯಾಗಲಿರುವ ತೇಜಸ್ವಿನಿ ಗೌಡ, ಯಶ್ಮಿ ಗೌಡ