Select Your Language

Notifications

webdunia
webdunia
webdunia
webdunia

ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಇಂದು ಕೋರ್ಟ್ ಪರೀಕ್ಷೆ

Darshan Thoogudeepa

Krishnaveni K

ಬೆಂಗಳೂರು , ಶುಕ್ರವಾರ, 13 ಸೆಪ್ಟಂಬರ್ 2024 (08:52 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಇಂದು ಮತ್ತೆ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿದೆ.

ನಿನ್ನೆ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಈ ವೇಳೆ ಮತ್ತೆ ಒಂದು ದಿನದ ಮಟ್ಟಿಗೆ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿತ್ತು. ಹೀಗಾಗಿ ಇಂದು ಮತ್ತೆ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ.

ನಿನ್ನೆ 24 ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಕಮಿಟಲ್ ಆದೇಶಕ್ಕೆ ಆರೋಪಿಗಳ ಪರ ವಕೀಲರಿಂದ ವಿರೋಧ ವ್ಯಕ್ತವಾಗಿದ್ದರಿಂದ ಇನ್ನೂ ಒಂದು ದಿನಕ್ಕೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಯಿತು. ಹೀಗಾಗಿ ಇಂದು ಮತ್ತೆ ಕೋರ್ಟ್ ಗೆ ಹಾಜರುಪಡಿಸಲಾಗುತ್ತದೆ.

ಈಗಾಗಲೇ ಎಸ್ ಪಿಪಿ ಡಿಜಿಟಲ್ ಸಾಕ್ಷ್ಯ ಒದಗಿಸಲು ಒಂದು ವಾರದ ಸಮಯ ಕೇಳಿದ್ದಾರೆ. ಈ ಸಾಕ್ಷ್ಯವನ್ನೂ ಒದಗಿಸುವವರೆಗೂ ನಟ ದರ್ಶನ್ ಪರ ಜಾಮೀನಿಗೆ ಅರ್ಜಿ ಸಲ್ಲಿಸದೇ ಇರಲು ಅವರ ಪರ ವಕೀಲರು ತೀರ್ಮಾನಿಸಿದ್ದಾರೆ. ಹೀಗಾಗಿ ಇಂದೂ ದರ್ಶನ್ ಆಂಡ್ ಗ್ಯಾಂಗ್ ಬಂಧನ ಮುಂದುವರಿಯುವ ಸಾಧ್ಯತೆಯೇ ಹೆಚ್ಚು.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ನೂ ಕಡಿಮೆಯಾಗದ ದರ್ಶನ್ ದೌಲತ್ತು, ಕ್ಯಾಮಾರಗೆ ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ (Video)