Select Your Language

Notifications

webdunia
webdunia
webdunia
webdunia

ದರ್ಶನ್ ಆಂಡ್ ಗ್ಯಾಂಗ್ ಗೆ ಎದೆಯಲ್ಲಿ ಢವ ಢವ: ರೇಣುಕಾಸ್ವಾಮಿ ಕೇಸ್ ನಲ್ಲಿ ಪೊಲೀಸರಿಗೆ ಸಿಕ್ಕಿದೆ ಮತ್ತೊಂದು ಬ್ರಹ್ಮಾಸ್ತ್ರ

ದರ್ಶನ್ ಆಂಡ್ ಗ್ಯಾಂಗ್ ಗೆ ಎದೆಯಲ್ಲಿ ಢವ ಢವ: ರೇಣುಕಾಸ್ವಾಮಿ ಕೇಸ್ ನಲ್ಲಿ ಪೊಲೀಸರಿಗೆ ಸಿಕ್ಕಿದೆ ಮತ್ತೊಂದು ಬ್ರಹ್ಮಾಸ್ತ್ರ

Sampriya

ಬೆಂಗಳೂರು , ಶುಕ್ರವಾರ, 2 ಆಗಸ್ಟ್ 2024 (16:38 IST)
ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪೊಲೀಸರು ಇದೀಗ ಪ್ರಕರಣ ಸಂಬಂಧ ಪ್ರಮುಖ ಸಾಕ್ಷಿವೊಂದು ಲಭ್ಯವಾಗಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನಿಂದ ಹೊರಬರಲು ಪ್ರಯತ್ನಿಸುತ್ತಿರುವ ಬೆನ್ನಲೇ ಅವರಿಗೆ ಇದೀಗ ಶಾಕಿಂಗ್ ಕಾದಿದೆ.

ಕೊಲೆ ನಡೆದ ದಿನದಂದು ಆರೋಪಿಗಳ ಚಲನವಲನವನ್ನು ಗಮನಿಸಿಲು ಇದೀಗ ದರ್ಶನ್ ಮನೆಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು  ರಿಟ್ರೀವ್​ ಮಾಡಿದ್ದಾರೆ. ಇದರಿಂದ ಹತ್ಯೆ ಪ್ರಕರಣದಲ್ಲಿ ಈ ಸಾಕ್ಷಿ ಪ್ರಮುಖವಾಗಲಿದ್ದು, ಇದರಿಂದ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ 17 ಮಂದಿ ವಿಚಾರಣಾಧೀನ ಕೈದಿಯಾಗಿದ್ದಾರೆ.

ಹತ್ಯೆ ನಡೆದ ಬಳಿಕ ಆರೋಪಿಗಳು ಪ್ರಕರಣದಿಂದ ಬಚಾವ್‌ ಆಗಲು ಸಾಕ್ಷಿ ನಾಶ ಮಾಡಲು ಪ್ರಯತ್ನಿಸಿರುವುದು ತನಿಖೆ ವೇಳೆ ತಿಳಿದುಬಂದಿದೆ. ಅದಲ್ಲದೆ ರೇಣುಕಾಸ್ವಾಮಿ ಹತ್ಯೆ ನಡೆಸಿದ ದಿನದ ದರ್ಶನ್ ಮನೆಯ ಸಿಸಿಟಿವಿ ದೃಶ್ಯವಳಿಗಳನ್ನು ಡಿಲೀಟ್ ಮಾಡಲಾಗಿತ್ತು. ಇದೀಗ ಸಿಐಡಿ ಸೈಬರ್ ತಜ್ಞರಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಈಗ ರಿಟ್ರೀವ್ ಮಾಡಲಾಗಿದೆ. ಇದರಲ್ಲಿ ಪ್ರಮುಖ ಆರೋಪಿಗಳ ಚಲನವಲನ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಭಾಷೆಯ ಹಾಡನ್ನು ನಾವೇ ಬಳಸುವುದು ಅಪರಾಧವೇ: ರಕ್ಷಿತ್ ಶೆಟ್ಟಿ