Webdunia - Bharat's app for daily news and videos

Install App

ನಟ ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಸೆರೆವಾಸ, ಎಷ್ಟು ದಿನ ಇಲ್ಲಿದೆ ಡೀಟೈಲ್ಸ್

Krishnaveni K
ಗುರುವಾರ, 12 ಸೆಪ್ಟಂಬರ್ 2024 (15:51 IST)
Photo Credit: X
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧನದಲ್ಲಿರುವ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಇಂದು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
 

ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ದರ್ಶನ್ ಆಂಡ್ ಗ್ಯಾಂಗ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮತ್ತೊಮ್ಮೆ ತಾವಿರುವ ಜೈಲಿನಿಂದಲೇ ನ್ಯಾಯಾಧೀಶರ ಮುಂದೆ ಹಾಜರಾದರು. ಈ ವೇಳೆ ನ್ಯಾಯಾಧೀಶರು ಪ್ರತಿಯೊಬ್ಬರನ್ನೂ ವಿಚಾರಿಸಿಕೊಂಡ ಬಳಿಕ ಇನ್ನೂ ಒಂದು ದಿನಕ್ಕೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದರು.

24 ನೇ ಎಸಿಎಂಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಕಮಿಟಲ್ ಆದೇಶಕ್ಕೆ ಆರೋಪಿಗಳ ಪರ ವಕೀಲರಿಂದ ವಿರೋಧ ವ್ಯಕ್ತವಾಗಿದ್ದರಿಂದ ಇನ್ನೂ ಒಂದು ದಿನಕ್ಕೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಯಿತು. ಈ ವೇಳೆ ಡಿಜಿಟಲ್ ಸಾಕ್ಷ್ಯ ಒದಗಿಸಲು ಇನ್ನೂ ಒಂದು ವಾರ ಬೇಕಾಗುತ್ತದೆ ಎಂದು ಎಸ್ ಪಿಪಿ ವಾದ ಮಂಡಿಸಿದ್ದಾರೆ.

ಡಾಕ್ಯುಮೆಂಟ್, ಪೆನ್ ಡ್ರೈವ್, ಸಿಡಿ, ಡಿವಿಆರ್ ಕೊಟ್ಟಿಲ್ಲ. ಅದನ್ನು ನಾಳೆಗೆ ಕೇಳಿದ್ದೇವೆ. ಕಮಿಟಲ್ ಆರ್ಡರ್ ಆದ ಬಳಿಕ ಸೆಷನ್ ಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವುದಾಗಿ ದರ್ಶನ್ ಪರ ವಕೀಲರು ಹೇಳಿದ್ದಾರೆ. ಇದರೊಂದಿಗೆ ದರ್ಶನ್ ಆಂಡ್ ಗ್ಯಾಂಗ್ ಸೆರೆ ವಾಸ ಮತ್ತೊಂದು ದಿನಕ್ಕೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments