Select Your Language

Notifications

webdunia
webdunia
webdunia
webdunia

ಎಂಇಎಸ್ ಪುಂಡಾಟಿಕೆ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ

ಎಂಇಎಸ್ ಪುಂಡಾಟಿಕೆ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗರಂ
ಬೆಳಗಾವಿ , ಶನಿವಾರ, 18 ಡಿಸೆಂಬರ್ 2021 (16:43 IST)
ಬೆಳಗಾವಿ: ಕನ್ನಡ ನಾಡಿನ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ‍್ವಂಸ ಮಾಡಿದ ಎಂಇಎಸ್ ಪುಂಡಾಟಿಕೆ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿಡಿ ಕಾರಿದ್ದಾರೆ.

‘ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ ಗಣರಾಜ್ಯೋತ್ಸವ ದಿನದಂದು ಮಡಿದ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ನೀಡತಕ್ಕದ್ದು ಎಂದು ದರ್ಶನ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಮೊನ್ನೆಯಷ್ಟೇ ಬೆಳಗಾವಿಯಲ್ಲಿ ಕನ್ನಡ ಧ್ವಜ ಸುಟ್ಟು ಹಾಕಿದ ಪ್ರಕರಣ ಕನ್ನಡಿಗರನ್ನು ಕೆರಳಿಸಿತ್ತು. ಈ ಸಂಬಂಧ ಸ್ಯಾಂಡಲ್ ವುಡ್ ಒಗ್ಗಟ್ಟಾಗಿ ಆಕ್ರೋಶ ಹೊರಹಾಕಿತ್ತು. ಇದೀಗ ಎಂಇಎಸ್ ಪುಂಡರು ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿ ವಿಕೃತಿ ಮೆರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಒಂದಾಗುತ್ತಿದೆ ಅಶ್ವಿನಿ ನಕ್ಷತ್ರದ ಜೆಕೆ-ಮಯೂರಿ ಜೋಡಿ