Webdunia - Bharat's app for daily news and videos

Install App

ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಸೋಮವಾರಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

Sampriya
ಗುರುವಾರ, 10 ಅಕ್ಟೋಬರ್ 2024 (16:42 IST)
ಬೆಂಗಳೂರು: ದಸರಾ ಮುಗಿಯುವುದರೊಳಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್, ಅವರ ಕುಟುಂಬ ಹಾಗೂ ಫ್ಯಾನ್ಸ್‌ಗೆ ಭಾರೀ ನಿರಾಸೆಯಾಗಿದೆ.

ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು 57ನೇ ಸಿಸಿ ಎಚ್ ನ್ಯಾಯಾಲಯದ ನ್ಯಾಯಾಧೀಶ್ ಜೈಶಂಕರ್ ಅವರು ಸುದೀರ್ಘವಾದ ವಾದ ಪ್ರತಿವಾದವನ್ನು ಆಲಿಸಿದರು.  ಆದೇಶವನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ. ಇದೀಗ ದರ್ಶನ್ ಜಾಮೀನು ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ.

ಬೆಳಗ್ಗೆ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಸುದೀರ್ಘವಾಗಿ ವಾದ ಮಂಡಿಸಿದ್ದರು. ಮಧ್ಯಾಹ್ನದ ನಂತರ ಸರ್ಕಾರಿ ವಕೀಲ ಎಸ್‌ಪಿಪಿ ಪ್ರಸನ್ನಕುಮಾರ್ ಅವರು ಪ್ರತಿವಾದ ಮಂಡಿಸಿದರು. ಸುದೀರ್ಘವಾಗಿ ನಡೆದ ನಡೆದ ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರು ಇದೀಗ ತೀರ್ಪನ್ನು ಕಾಯ್ದಿರಿಸಿದ್ದಾರೆ.

ಈಗಾಗಲೇ ದರ್ಶನ್ ಅವರ ಜಾಮೀನು ಅರ್ಜಿ ವಿಚಾರ ಹಲವು ಬಾರಿ ಮುಂದೂಡಲಾಗಿತ್ತು. ನಿರಂತರವಾಗಿ ನಡೆದ ವಾದ ಪ್ರತಿವಾದದ ಬಳಿಕ ಇದೀಗ ದರ್ಶನ್ ಜಾಮೀನು ಅರ್ಜಿ ತೀರ್ಪು ರೋಚಕ ಘಟ್ಟಕ್ಕೆ ಬಂದು ನಿಂತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments