Webdunia - Bharat's app for daily news and videos

Install App

ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಎಸ್‌ಪಿಪಿ ಪ್ರಸನ್ನ ಕುಮಾರ್‌ ವಾದಕ್ಕೆ ನಾಳೆ ಸಿವಿ ನಾಗೇಶ್ ಕೌಂಟರ್‌

Sampriya
ಬುಧವಾರ, 9 ಅಕ್ಟೋಬರ್ 2024 (18:07 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಇಂದು ಕೂಡಾ ನಿರಾಸೆಯಾಗಿದೆ. ಸುದೀರ್ಘವಾಗಿ  ಇಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಸುದೀರ್ಘವಾಗಿ ಪ್ರತಿವಾದ ಮಂಡಿಸಿದ್ದಾರೆ.

ಎಸ್​ಪಿಪಿ ಪ್ರಸನ್ನ ಕುಮಾರ್ ವಾದಕ್ಕೆ ಪ್ರತಿವಾದ ಸಲ್ಲಿಸಲು ಸಿವಿ ನಾಗೇಶ್ ಅವರಿಗೆ ಅವಕಾಶ ನೀಡಲಾಯ್ತು. ಆದರೆ ತಾವು ನಾಳೆ (ಅಕ್ಟೋಬರ್ 10) ರಂದು ವಾದ ಮಂಡಿಸುವುದಾಗಿ ಹೇಳಿದರು.

ಅದರಿಂದ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಕೋರ್ಟ್‌ ಮುಂದೂಡಿದೆ. ಇನ್ನು ಎ1 ಪವಿತ್ರಾ, ಎ8, ಎ11, ಎ12 ಹಾಗೂ ಎ13 ಅವರುಗಳ ಜಾಮೀನು ಅರ್ಜಿಯ ಕುರಿತಾದ ಆದೇಶವನ್ನು ಅಕ್ಟೋಬರ್ 14 ರಂದು ಪ್ರಕಟಿಸುವುದಾಗಿ ನ್ಯಾಯಾಧೀಶರು ಹೇಳಿದರು.

ದಿನದ ಅಂತ್ಯದ ವೇಳೆಗೆ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.  ಈಗಾಗಲೇ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹಲವು ಬಾರಿ ಮುಂದೂಡಲಾಗಿದೆ. ಇನ್ನೂ ದಸರಾ ಮುಗಿಯುವ ವೇಳೆಗೆ ದರ್ಶನ್‌ಗೆ ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಇಂದು ನಿರಾಸೆಯಾಗಿದೆ. ಮತ್ತೇ ನಾಳೆ ದರ್ಶನ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರವಾಗಲಿದೆ.

ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ ಆರೋಪಿಗಳಾದ ರವಿಶಂಕರ್, ದೀಪಕ್, ಲಕ್ಷ್ಮಣ್‌, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಅ.14ಕ್ಕೆ ಕೋರ್ಟ್ ಕಾಯ್ದಿರಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments