Webdunia - Bharat's app for daily news and videos

Install App

ದರ್ಶನ್ ಗೆ ಈಗ ಅನಾರೋಗ್ಯವೇ ವರವಾಗುವ ಲಕ್ಷಣವಿದೆ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (08:52 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಜಾಮೀನು ಅರ್ಜಿ ಹಣೆಬರಹ ಇಂದು ತಿಳಿದುಬರಲಿದೆ. ಆದರೆ ದರ್ಶನ್ ಗೆ ಈಗ ಅನಾರೋಗ್ಯವೇ ವರವಾಗುವ ಲಕ್ಷಣ ಕಾಣುತ್ತಿದೆ.

ನಟ ದರ್ಶನ್ ಬಳ್ಳಾರಿ ಜೈಲಿಗೆ ಬಂದಾಗಿನಿಂದ ಬೆನ್ನು ನೋವಿನ ಸಮಸ್ಯೆ ಅನುಭವಿಸುತ್ತಿದ್ದಾರೆ. ಜೈಲಿಗೇ ಬಂದಿದ್ದ ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿದ್ದು ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದೆ, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. ಆದರೆ ಸದ್ಯಕ್ಕೆ ದರ್ಶನ್ ಸ್ಕ್ಯಾನಿಂಗ್ ಕೂಡಾ ಮಾಡಿಸಿಕೊಳ್ಳಲು ನಿರಾಕರಿಸಿದ್ದು ಕೇವಲ ನೋವು ನಿವಾರಕ ಗುಳಿಗೆ ಸೇವಿಸುತ್ತಿದ್ದಾರೆ.

ಬೆಂಗಳೂರಿಗೆ ಹೋದ ಮೇಲೆ ನಾನೇ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವೆ ಎಂದಿದ್ದಾರಂತೆ. ಆದರೆ ಇದೇ ವಿಚಾರ ಅವರ ಜಾಮೀನು ಭವಿಷ್ಯಕ್ಕೆ ವರವಾಗುವ ಸಾಧ್ಯತೆಯಿದೆ. ಅನಾರೋಗ್ಯವಾಗಿದೆ, ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ ಜಾಮೀನು ನೀಡಿ ಎಂದು ವಕೀಲರು
ವಾದ ಮಂಡಿಸಬಹುದು.

ಇದರಿಂದ ನಟ ದರ್ಶನ್ ಇಂದೇ ಅಲ್ಲದಿದ್ದರೂ ಕೆಲವೇ ದಿನಗಳಲ್ಲಿ ಜಾಮೀನು ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಬಂಧನದಲ್ಲಿರುವ ಆರೋಪಿಗಳಿಗೆ ಅನಾರೋಗ್ಯವೇ ಹಲವು ಬಾರಿ ಪ್ಲಸ್ ಪಾಯಿಂಟ್ ಆಗುವುದು ಇದೆ. ಈಗ ದರ್ಶನ್ ವಿಚಾರದಲ್ಲೂ ಅದೇ ಆಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments