Webdunia - Bharat's app for daily news and videos

Install App

ಇಂದೇ ನಟ ದರ್ಶನ್ ಗೆ ಬಿಡುಗಡೆ ಭಾಗ್ಯ: ಸ್ವಾಗತಿಸಲು ಫ್ಯಾನ್ಸ್ ರೆಡಿ

Krishnaveni K
ಮಂಗಳವಾರ, 8 ಅಕ್ಟೋಬರ್ 2024 (11:51 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಇಂದೇ ಜಾಮೀನು ಸಿಕ್ಕಿ ಬಿಡುಗಡೆಯಾಗಲಿದ್ದಾರಾ? ಅವರ ಅಭಿಮಾನಿಗಳಲ್ಲಿ ಡಿಬಾಸ್ ಇಂದೇ ಬಿಡುಗಡೆಯಾಗಲಿದ್ದಾರೆ ಎಂಬ ವಿಶ್ವಾಸವಿದೆ.

ದರ್ಶನ್ ಸದ್ಯಕ್ಕೆ ಬಳ್ಳಾರಿ ಜೈಲಿನಲ್ಲಿದ್ದಾರೆ. ಅವರಿಗೆ ಜಾಮೀನು ಸಿಕ್ಕರೆ ಬಳ್ಳಾರಿಯಿಂದ ಬೆಂಗಳೂರಿಗೆ ಕರೆತರಲು ಹೆಲಿಕಾಪ್ಟರ್ ರೆಡಿಯಾಗಿದೆ ಎನ್ನಲಾಗಿದೆ. ದರ್ಶನ್ ಬಿಡುಗಡೆಯಾದರೆ ಅವರನ್ನು ಸ್ವಾಗತಿಸಲು ಫ್ಯಾನ್ಸ್ ಕೂಡಾ ಸಿದ್ಧರಾಗಿದ್ದಾರೆ. ಜೈಲಿನ ಹೊರಭಾಗದಲ್ಲೇ ಫ್ಯಾನ್ಸ್ ಸಂಭ್ರಮಾಚರಿಸಲಿದ್ದಾರೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕಳೆದ ಕೆಲವು ದಿನಗಳಿಂದ ಕೋರ್ಟ್ ನಲ್ಲಿ ನಡೆಯುತ್ತಿದೆ. ಅದು ಇಂದಿಗೆ ಮತ್ತೆ ಮುಂದೂಡಿಕೆಯಾಗಿದ್ದು ಇಂದು ನ್ಯಾಯಾಧೀಶರು ಯಾವ ತೀರ್ಮಾನಕ್ಕೆ ಬರುತ್ತಾರೆ ಎಂದು ಕಾದುನೋಡಬೇಕಿದೆ. ದರ್ಶನ್ ಪರ ವಕೀಲ ಸಿವಿ ನಾಗೇಶ್ ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ.

ಪೊಲೀಸರು ನೀಡಿದ್ದ ಸಾಕ್ಷ್ಯಗಳೆಲ್ಲವೂ ಕಪೋಲಕಲ್ಪಿತ ಎಂದು ಪ್ರಬಲ ವಾದ ಮಂಡಿಸಿದ್ದಾರೆ. ಇಂದು ಸರ್ಕಾರೀ ಅಭಿಯೋಜಕ ಪ್ರಸನ್ನಕುಮಾರ್ ತಮ್ಮ ವಾದ ಮಂಡಿಸಲಿದ್ದಾರೆ. ದರ್ಶನ್ ಗೆ ಈ ಪ್ರಕರಣದಲ್ಲಿ ಜಾಮೀನು ಯಾಕೆ ನೀಡಬಾರದು ಎಂದು ವಾದ ಮಂಡಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments