Webdunia - Bharat's app for daily news and videos

Install App

ಜಾಮೀನು ಸಿಗುತ್ತೆ ಅಂತ ಚಾತಕಪಕ್ಷಿಯಂತೆ ಕಾದಿರುವ ದರ್ಶನ್: ಡಿಬಾಸ್ ಸ್ವಾಗತಕ್ಕೆ ಫ್ಯಾನ್ಸ್ ಸಜ್ಜು

Krishnaveni K
ಬುಧವಾರ, 30 ಅಕ್ಟೋಬರ್ 2024 (08:42 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಜಾಮೀನು ಅರ್ಜಿ ಭವಿಷ್ಯ ಇಂದು ತೀರ್ಮಾನವಾಗಲಿದೆ. ಅವರಿಗೆ ಇಂದು ಜಾಮೀನು ಸಿಗುವ ನಿರೀಕ್ಷೆಯಿದೆ.

ಕೆಳಹಂತದ ಕೋರ್ಟ್ ನಲ್ಲಿ ಜಾಮೀನು ಸಿಗದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಕಾರಣ ಅವರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಅದು ದರ್ಶನ್ ಪಾಲಿಗೆ ವರವಾಗಿದೆ.

ಇದೇ ವಿಚಾರವನ್ನಿಟ್ಟುಕೊಂಡು ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಮಧ್ಯಂತರ ಜಾಮೀನು ಕೊಡಿ ಎಂದು ಮನವಿ ಮಾಡಿದ್ದಾರೆ. ನಿನ್ನೆ ಎಸ್ ಪಿಪಿ ಪ್ರಸನ್ನ ಕುಮಾರ್ ಪ್ರತಿವಾದದ ವೇಳೆ ಜಡ್ಜ್ ಕೂಡಾ ಚಿಕಿತ್ಸೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದಂತೆ ಕಂಡುಬಂದಿದೆ. ಹೀಗಾಗಿ ಅವರಿಗೆ ಇಂದು ಜಾಮೀನು ಸಿಗುವ ನಿರೀಕ್ಷೆಯಿದೆ.

ಪರ-ವಿರೋಧ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದಾರೆ. ಹೀಗಾಗಿ ದರ್ಶನ್ ಪಾಲಿಗೆ ಇಂದು ಮಹತ್ವದ ದಿನವಾಗಿದೆ. ಒಂದು ವೇಳೆ ಅವರಿಗೆ ಇಂದು ಜಾಮೀನು ಸಿಕ್ಕರೆ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸ್ವಾಗತಿಸಲು ಸಿದ್ಧರಾಗಿ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments