ಮಗ ವಿನೀಶ್ ನನ್ನು ತಬ್ಬಿಕೊಂಡು ಅತ್ತ ನಟ ದರ್ಶನ್: ಇದೆಲ್ಲಾ ಯಾಕ್ ಬೇಕಿತ್ತು

Krishnaveni K
ಮಂಗಳವಾರ, 30 ಜುಲೈ 2024 (11:41 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ನಿನ್ನೆ ತಮ್ಮ ಮಗ ವಿನೇಶ್ ನನ್ನು ತಬ್ಬಿಕೊಂಡು ಹಗುರವಾಗಿದ್ದಾರೆ ಎನ್ನಲಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೊನ್ನೆಯಷ್ಟೇ ಪತಿಯ ರಕ್ಷಣೆಗಾಗಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ಚಂಡಿಕಾಹೋಮ ಮಾಡಿಸಿದ್ದರು. ದೇವಾಲಯದ ಪ್ರಸಾದವನ್ನು ಕೊಡಲೆಂದೇ ನಿನ್ನೆ ವಿಜಯಲಕ್ಷ್ಮಿ, ಪುತ್ರ ವಿನೇಶ್, ಸಹೋದರ ದಿನಕರ್ ತೂಗುದೀಪ ಜೈಲಿಗೆ ಭೇಟಿ ನೀಡಿದ್ದರು.

ಈ ವೇಳೆ ಮಗನನ್ನು ಕಂಡು ದರ್ಶನ್ ಭಾವುಕರಾಗಿದ್ದಾರೆ. ವಿನೀಶ್ ನನ್ನು ತಬ್ಬಿಕೊಂಡು ಮನಸ್ಸಿನ ಭಾರ ಹಗುರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಮೊದಲೂ ವಿನೀಶ್ ನೋಡಿ ದರ್ಶನ್ ಭಾವುಕರಾಗಿ ಕಣ್ಣೀರು ಸುರಿಸಿದ್ದರು. ಮಗ ವಿನೀಶ್ ಎಂದರೆ ದರ್ಶನ್ ಗೆ ಪಂಚಪ್ರಾಣ. ಈಗ ಜೈಲಿನಲ್ಲಿರುವ ತಂದೆಯನ್ನು ನೋಡಿ ವಿನೀಶ್ ಕೂಡಾ ಬೇಸರದಲ್ಲಿದ್ದಾರೆ.

ನಿನ್ನೆಯೂ ಮಗನನ್ನು ನೋಡಿ ಬೇಸರಗೊಂಡಿದ್ದಾರೆ. ದರ್ಶನ್ ಪರಿಸ್ಥಿತಿ ನೋಡಿ ಜನ ಇಂತಹ ಪರಿಸ್ಥಿತಿ ಯಾಕೆ ಮೈಮೇಲೆಳೆದುಕೊಳ್ಳುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments