Webdunia - Bharat's app for daily news and videos

Install App

ಚಾರ್ಜ್‌ಶೀಟ್ ಸಲ್ಲಿಕೆ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀಗೆ ಕರೆ ಮಾಡಿದ ದರ್ಶನ್‌

Sampriya
ಬುಧವಾರ, 4 ಸೆಪ್ಟಂಬರ್ 2024 (17:37 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗುತ್ತಿದ್ದ ಹಾಗೇ ಎ2 ಆರೋಪಿ ದರ್ಶನ್ ಅವರು ಪತ್ನಿ ವಿಜಯಲಕ್ಷ್ಮೀಗೆ ಕರೆ ಮಾಡಿದ್ದಾರೆ.

ಜೈಲಿನಿಂದ ಪತ್ನಿಗೆ ಕರೆ ಮಾಡಿದ ನಟ ದರ್ಶನ್ ಅವರು 5 ನಿಮಿಷಗಳ ಕಾಲ ಚಾರ್ಜ್‌ಶೀಟ್ ಸಂಬಂಧ ಮಾತುಕತೆ ನಡೆಸಿದ್ದಾರೆ. ಜೈಲಿನ ಲ್ಯಾಂಡ್‌ಲೈನ್ ಫೋನ್‌ನಿಂದ ವಿಜಯಲಕ್ಷ್ಮೀಗೆ ಕರೆ ಮಾಡಿದ್ದ ದರ್ಶನ್ ಈ ವೇಳೆ ಭಾವುಕರಾಗಿದ್ದಾರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ 89 ದಿನಗಳು ಆಗುತ್ತಿರುವಾಗ ಪೊಲೀಸರು ಸುಮಾರು ನಾಲ್ಕು ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇನ್ನು ಚಾರ್ಜ್‌ಶೀಟ್ ಹೊಂದಿದ್ದ ವಾಹನ ನ್ಯಾಯಾಲಯದತ್ತ ಸಾಗಿಸುತ್ತಿದ್ದ ಹಾಗೇ ದರ್ಶನ್ ಚಿಂತೆಗೆ ಒಳಗಾಗಿದ್ದರು.

ಈ ಸಂಬಂಧ ವಕೀಲರ ಜತೆ ಮಾತನಾಡಬೇಕೆಂದ ದರ್ಶನ್ ಅವರು ಜೈಲಾಧಿಕಾರಿಗಳ ಬಳಿ ಕರೆ ಮಾಡಿಕೊಡುವಂತೆ ಕೇಳಿಕೊಂಡಿದ್ದಾರೆ. ವಕೀಲರ ಫೋನ್ ನಂಬರ್ ಗೊತ್ತಿಲ್ಲದ ಕಾರಣ, ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕರೆ ಮಾಡಿ ಚಾರ್ಜ್‌ಶೀಟ್ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಇದೀಗ ಚಾರ್ಜ್‌ಶೀಟ್ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ಸೆಲ್‌ನಲ್ಲಿ ಟಿವಿ ಹಾಕಿಸಿಕೊಂಡುವಂತೆ ಜೈಲಾಧಿಕಾರಿಗಳ ಬಳಿ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments