Webdunia - Bharat's app for daily news and videos

Install App

ಬೇಲ್ ಪಡೆದು ಹಾಯಾಗಿರುವ ದರ್ಶನ್ ಗೆ ಉರಿಯುವಂತೆ ಮಾಡಿದ ಪೊಲೀಸರ ನಿರ್ಧಾರ

Krishnaveni K
ಸೋಮವಾರ, 30 ಡಿಸೆಂಬರ್ 2024 (10:50 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ರೆಗ್ಯುಲರ್ ಜಾಮೀನು ಪಡೆದು ಮನೆಯಲ್ಲಿರುವ ನಟ ದರ್ಶನ್ ಗೆ ಪೊಲೀಸರ ಈ ನಿರ್ಧರ ಉರಿಯುವಂತೆ ಮಾಡಲಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಐದೂವರೆ ತಿಂಗಳು ಜೈಲು ವಾಸ ಅನುಭವಿಸಿದ ನಟ ದರ್ಶನ್ ಆರೋಗ್ಯದ ನೆಪದಲ್ಲಿ ಮೊದಲು ಮಧ್ಯಂತರ ಜಾಮೀನು ಪಡೆದರು. ಇದೀಗ ಹೈಕೋರ್ಟ್ ಅವರಿಗೆ ರೆಗ್ಯುಲರ್ ಜಾಮೀನನ್ನೂ ನೀಡಿದೆ. ಇದರ ಬೆನ್ನಲ್ಲೇ ದರ್ಶನ್ ಫಾರ್ಮ್ ಹೌಸ್ ಗೆ ಅನುಮತಿ ಪಡೆದು ತೆರಳಿದ್ದು ಕುಟುಂಬ ಸದಸ್ಯರೊಂದಿಗೆ ಹಾಯಾಗಿದ್ದಾರೆ.

ಈ ನಡುವೆ ಅವರು ಮತ್ತೆ ಸಂಕ್ರಾಂತಿ ಬಳಿಕ ಶೂಟಿಂಗ್ ನಲ್ಲೂ ಭಾಗಿಯಾಗಲಿರುವ ಸುದ್ದಿಗಳು ಬಂದಿತ್ತು. ಆದರೆ ಪೊಲೀಸರು ಬೇರೆಯೇ ಲೆಕ್ಕಾಚಾರ ಹಾಕಿದ್ದು ದರ್ಶನ್ ಗೆ ಬೇಲ್ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಇದೇ ವಾರ ಮೇಲ್ಮನವಿ ಸಲ್ಲಿಸಲಿದ್ದಾರೆ. ಇದಕ್ಕೆ ಗೃಹ ಇಲಾಖೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ.

ದರ್ಶನ್ ವಿರುದ್ಧ ಹಲ್ಲೆ, ಕೊಲೆ, ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ ಆರೋಪ ಮತ್ತು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ ಆರೋಪಗಳಿವೆ. ಇಷ್ಟೆಲ್ಲಾ ಆರೋಪಗಳಿದ್ದ ವ್ಯಕ್ತಿ ಪ್ರಭಾವಿಯಾಗಿದ್ದು ಆತನಿಗೆ ಬೇಲ್ ನೀಡಿರುವದರಿಂದ ಕೇಸ್ ಹಳ್ಳ ಹಿಡಿಯಬಹುದು ಎಂಬುದು ಪೊಲೀಸರ ಆತಂಕವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments