Webdunia - Bharat's app for daily news and videos

Install App

ಬೇಲ್ ಪಡೆದು ಹಾಯಾಗಿರುವ ದರ್ಶನ್ ಗೆ ಉರಿಯುವಂತೆ ಮಾಡಿದ ಪೊಲೀಸರ ನಿರ್ಧಾರ

Krishnaveni K
ಸೋಮವಾರ, 30 ಡಿಸೆಂಬರ್ 2024 (10:50 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ರೆಗ್ಯುಲರ್ ಜಾಮೀನು ಪಡೆದು ಮನೆಯಲ್ಲಿರುವ ನಟ ದರ್ಶನ್ ಗೆ ಪೊಲೀಸರ ಈ ನಿರ್ಧರ ಉರಿಯುವಂತೆ ಮಾಡಲಿದೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಐದೂವರೆ ತಿಂಗಳು ಜೈಲು ವಾಸ ಅನುಭವಿಸಿದ ನಟ ದರ್ಶನ್ ಆರೋಗ್ಯದ ನೆಪದಲ್ಲಿ ಮೊದಲು ಮಧ್ಯಂತರ ಜಾಮೀನು ಪಡೆದರು. ಇದೀಗ ಹೈಕೋರ್ಟ್ ಅವರಿಗೆ ರೆಗ್ಯುಲರ್ ಜಾಮೀನನ್ನೂ ನೀಡಿದೆ. ಇದರ ಬೆನ್ನಲ್ಲೇ ದರ್ಶನ್ ಫಾರ್ಮ್ ಹೌಸ್ ಗೆ ಅನುಮತಿ ಪಡೆದು ತೆರಳಿದ್ದು ಕುಟುಂಬ ಸದಸ್ಯರೊಂದಿಗೆ ಹಾಯಾಗಿದ್ದಾರೆ.

ಈ ನಡುವೆ ಅವರು ಮತ್ತೆ ಸಂಕ್ರಾಂತಿ ಬಳಿಕ ಶೂಟಿಂಗ್ ನಲ್ಲೂ ಭಾಗಿಯಾಗಲಿರುವ ಸುದ್ದಿಗಳು ಬಂದಿತ್ತು. ಆದರೆ ಪೊಲೀಸರು ಬೇರೆಯೇ ಲೆಕ್ಕಾಚಾರ ಹಾಕಿದ್ದು ದರ್ಶನ್ ಗೆ ಬೇಲ್ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಇದೇ ವಾರ ಮೇಲ್ಮನವಿ ಸಲ್ಲಿಸಲಿದ್ದಾರೆ. ಇದಕ್ಕೆ ಗೃಹ ಇಲಾಖೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದೆ.

ದರ್ಶನ್ ವಿರುದ್ಧ ಹಲ್ಲೆ, ಕೊಲೆ, ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ ಆರೋಪ ಮತ್ತು ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ ಆರೋಪಗಳಿವೆ. ಇಷ್ಟೆಲ್ಲಾ ಆರೋಪಗಳಿದ್ದ ವ್ಯಕ್ತಿ ಪ್ರಭಾವಿಯಾಗಿದ್ದು ಆತನಿಗೆ ಬೇಲ್ ನೀಡಿರುವದರಿಂದ ಕೇಸ್ ಹಳ್ಳ ಹಿಡಿಯಬಹುದು ಎಂಬುದು ಪೊಲೀಸರ ಆತಂಕವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments