Webdunia - Bharat's app for daily news and videos

Install App

ದರ್ಶನ್ ಬಚಾವ್ ಮಾಡಲು ಆಪ್ತರು ಮಾಡಿದ್ದ ಭಾರೀ ಸಂಚು ಬಯಲು

Krishnaveni K
ಸೋಮವಾರ, 9 ಸೆಪ್ಟಂಬರ್ 2024 (11:22 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ರನ್ನು ಬಚಾವ್ ಮಾಡಲು ಅವರ ಆಪ್ತರು ದೊಡ್ಡ ಪ್ಲ್ಯಾನ್ ನ್ನೇ ಮಾಡಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ನಟ ದರ್ಶನ್ ಗೆ ರಾಜಕೀಯ, ಸಿನಿಮಾ ರಂಗದಲ್ಲಿ ಪ್ರಭಾವಿಗಳ ಸ್ನೇಹ ಸಂಬಂಧವಿದೆ. ಇವರನ್ನು ಬಳಸಿಕೊಂಡು ದರ್ಶನ್ ತಮ್ಮ  ವಿರುದ್ಧ ಬಂದಿರುವ ಆರೋಪದಿಂದ ಬಚಾವ್ ಆಗಲು ಸಾಕಷ್ಟು ಪ್ರಯತ್ನ ನಡೆಸಿದ್ದರಂತೆ. ಇದಕ್ಕಾಗಿ ತಮ್ಮ ಆಪ್ತರ ಮೂಲಕ ಎಸ್ ಪಿಪಿ ಬದಲಾವಣೆಗೆ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರೀ ಅಭಿಯೋಜಕರಾಗಿ ಖ್ಯಾತ ವಕೀಲ ಪ್ರಸನ್ನಕುಮಾರ್ ಅವರನ್ನು ನೇಮಿಸಲಾಗಿದೆ. ಪ್ರಸನ್ನಕುಮಾರ್ ಅತ್ಯಂತ ನಿಪುಣ ವಕೀಲರಾಗಿದ್ದು, ಅವರು ವಾದ ಮಾಡಿದರೆ ತಮಗೆ ಹಿನ್ನಡೆಯಾಗಬಹುದು ಎಂದು ದರ್ಶನ್ ಲೆಕ್ಕಾಚಾರ ಹಾಕಿದ್ದರು.

ಇದಕ್ಕಾಗಿ ಪ್ರಭಾವಿಗಳ ಮೂಲಕ ಅವರ ಬದಲಾವಣೆಗೆ  ಪ್ರಯತ್ನ ನಡೆಸಿದ್ದರಂತೆ. ಆದರೆ ಸರ್ಕಾರ ಈ ವಿಚಾರದಲ್ಲಿ ಅಚಲವಾಗಿ ನಿಂತಿದೆ. ಪ್ರಸನ್ನಕುಮಾರ್ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದಿತ್ತು. ಇದು ದರ್ಶನ್ ಆಂಡ್ ಗ್ಯಾಂಗ್ ಗೆ ದೊಡ್ಡ ಹಿನ್ನಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments