Webdunia - Bharat's app for daily news and videos

Install App

ವೈದ್ಯರು ಹೇಳಿದರೂ ಶಸ್ತ್ರಚಿಕಿತ್ಸೆ ತಡಮಾಡ್ತಿರುವ ದರ್ಶನ್: ಇದರ ಹಿಂದಿದೆ ಬಿಗ್ ಪ್ಲ್ಯಾನ್

Krishnaveni K
ಶನಿವಾರ, 9 ನವೆಂಬರ್ 2024 (14:07 IST)
ಬೆಂಗಳೂರು: ಬೆನ್ನು ನೋವಿನ ಚಿಕಿತ್ಸೆ ನೆಪದಲ್ಲಿ ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆ ಸೇರಿರುವ ನಟ ದರ್ಶನ್ ವೈದ್ಯರು ಸಲಹೆ ನೀಡಿದರೂ ಇನ್ನೂ ಶಸ್ತ್ರಚಿಕಿತ್ಸೆಗೊಳಗಾದೇ ತಡ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಪ್ಲ್ಯಾನ್ ಇದೆ ಎನ್ನಲಾಗುತ್ತಿದೆ.

ನಟ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಒಂದು ವಾರವಾಗಿದೆ. ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ಕುಂಟುತ್ತಾ ನಡೆದಾಡುವ ಪರಿಸ್ಥಿತಿಯಿದೆ. ವಿವಿಧ ಪರೀಕ್ಷೆಗಳನ್ನು ನಡೆಸಿದ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆ. ಆದರೆ ಇದುವರೆಗೆ ದರ್ಶನ್ ಶಸ್ತ್ರಚಿಕಿತ್ಸೆಯನ್ನು ಮುಂದೂಡುತ್ತಲೇ ಬಂದಿದ್ದಾರೆ.

ಅತ್ತ ಪತ್ನಿ ವಿಜಯಲಕ್ಷ್ಮಿ ಮತ್ತು ಕುಟುಂಬಸ್ಥರು ದರ್ಶನ್ ಚಿಕಿತ್ಸಾ ವಿವರವನ್ನು ಮಾಧ್ಯಮಗಳಿಗೆ ಬಹಿರಂಗಪಡಿಸದಂತೆ ಆಸ್ಪತ್ರೆಗೆ ಮನವಿ ಮಾಡಿದ್ದಾರೆ. ಹೀಗಾಗಿ ಅಧಿಕೃತವಾಗಿ ಆಸ್ಪತ್ರೆ ಯಾವುದೇ ಹೇಳಿಕೆ ಬಿಡುಗಡೆ ಮಾಡುತ್ತಿಲ್ಲ. ಹಾಗಿದ್ದರೂ ದರ್ಶನ್ ಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೂ ತಡ ಮಾಡುತ್ತಿರುವುದಕ್ಕೆ ಒಂದು ಪ್ರಬಲ ಕಾರಣವಿದೆ ಎನ್ನಲಾಗುತ್ತಿದೆ.

ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಮತ್ತೆ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಹೀಗಾಗಿ ಅವರು ಅರ್ಜಿ ಸಲ್ಲಿಸುವವರೆಗೂ ಕಾದು ನೋಡುವ ತಂತ್ರ ಅನುಸರಿಸಲಿದ್ದಾರೆ. ಅದೇ ರೀತಿ ಶಸ್ತ್ರಚಿಕಿತ್ಸೆ ತಡ ಮಾಡಿದಷ್ಟೂ ಅದೇ ನೆಪದಲ್ಲಿ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಬಹುದು ಎಂಬ ಲೆಕ್ಕಾಚಾರವೂ ಇದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದೇ 29, 30 ನಟ ಚಿಕ್ಕಣ್ಣ ಪಾವನಾ ಮದುವೆ, ಎಲ್ಲಿ ಗೊತ್ತಾ

ಮಾತನಾಡುವ ಮುನ್ನ ಪದಗಳನ್ನು ತೂಗಿ ನೋಡಿ, ಯೋಚಿಸಿ: ಕಂಗನಾ ವಿರುದ್ಧ ಸೋನು ಸೂದ್ ಗರಂ

ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಟ್ರೈಲರ್ ರಿಲೀಸ್: ಲಿಂಕ್ ಇಲ್ಲಿದೆ Video

ರಾಮಾಯಣ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಫಿಕ್ಸ್ ಮಾಡಿದ ವಿಶೇಷ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

ಅವರ ವಯಸ್ಸಿನಲ್ಲಿ ನನಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದ್ದವು: ಸೌರವ್ ದಾಸ್ ವಿರುದ್ಧ ಕಂಗನಾ ರಣಾವತ್ ಕಿಡಿ

ಮುಂದಿನ ಸುದ್ದಿ
Show comments