Webdunia - Bharat's app for daily news and videos

Install App

ವೈದ್ಯರು ಹೇಳಿದರೂ ಶಸ್ತ್ರಚಿಕಿತ್ಸೆ ತಡಮಾಡ್ತಿರುವ ದರ್ಶನ್: ಇದರ ಹಿಂದಿದೆ ಬಿಗ್ ಪ್ಲ್ಯಾನ್

Krishnaveni K
ಶನಿವಾರ, 9 ನವೆಂಬರ್ 2024 (14:07 IST)
ಬೆಂಗಳೂರು: ಬೆನ್ನು ನೋವಿನ ಚಿಕಿತ್ಸೆ ನೆಪದಲ್ಲಿ ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆ ಸೇರಿರುವ ನಟ ದರ್ಶನ್ ವೈದ್ಯರು ಸಲಹೆ ನೀಡಿದರೂ ಇನ್ನೂ ಶಸ್ತ್ರಚಿಕಿತ್ಸೆಗೊಳಗಾದೇ ತಡ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಪ್ಲ್ಯಾನ್ ಇದೆ ಎನ್ನಲಾಗುತ್ತಿದೆ.

ನಟ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಒಂದು ವಾರವಾಗಿದೆ. ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ಕುಂಟುತ್ತಾ ನಡೆದಾಡುವ ಪರಿಸ್ಥಿತಿಯಿದೆ. ವಿವಿಧ ಪರೀಕ್ಷೆಗಳನ್ನು ನಡೆಸಿದ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆ. ಆದರೆ ಇದುವರೆಗೆ ದರ್ಶನ್ ಶಸ್ತ್ರಚಿಕಿತ್ಸೆಯನ್ನು ಮುಂದೂಡುತ್ತಲೇ ಬಂದಿದ್ದಾರೆ.

ಅತ್ತ ಪತ್ನಿ ವಿಜಯಲಕ್ಷ್ಮಿ ಮತ್ತು ಕುಟುಂಬಸ್ಥರು ದರ್ಶನ್ ಚಿಕಿತ್ಸಾ ವಿವರವನ್ನು ಮಾಧ್ಯಮಗಳಿಗೆ ಬಹಿರಂಗಪಡಿಸದಂತೆ ಆಸ್ಪತ್ರೆಗೆ ಮನವಿ ಮಾಡಿದ್ದಾರೆ. ಹೀಗಾಗಿ ಅಧಿಕೃತವಾಗಿ ಆಸ್ಪತ್ರೆ ಯಾವುದೇ ಹೇಳಿಕೆ ಬಿಡುಗಡೆ ಮಾಡುತ್ತಿಲ್ಲ. ಹಾಗಿದ್ದರೂ ದರ್ಶನ್ ಗೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೂ ತಡ ಮಾಡುತ್ತಿರುವುದಕ್ಕೆ ಒಂದು ಪ್ರಬಲ ಕಾರಣವಿದೆ ಎನ್ನಲಾಗುತ್ತಿದೆ.

ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಪೊಲೀಸರು ಮತ್ತೆ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಹೀಗಾಗಿ ಅವರು ಅರ್ಜಿ ಸಲ್ಲಿಸುವವರೆಗೂ ಕಾದು ನೋಡುವ ತಂತ್ರ ಅನುಸರಿಸಲಿದ್ದಾರೆ. ಅದೇ ರೀತಿ ಶಸ್ತ್ರಚಿಕಿತ್ಸೆ ತಡ ಮಾಡಿದಷ್ಟೂ ಅದೇ ನೆಪದಲ್ಲಿ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಬಹುದು ಎಂಬ ಲೆಕ್ಕಾಚಾರವೂ ಇದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments