Webdunia - Bharat's app for daily news and videos

Install App

ದರ್ಶನ್ ಕೇಳಿದ್ದು ಬಳ್ಳಾರಿ ಜೈಲಿಗೆ ಬಂದೇ ಬಿಡ್ತು

Krishnaveni K
ಸೋಮವಾರ, 2 ಸೆಪ್ಟಂಬರ್ 2024 (16:31 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿದ್ದು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕೆ ಅವರು ಸರ್ಜಿಕಲ್ ಚೇರ್ ಗೆ ಬೇಡಿಕೆಯಿಟ್ಟಿದ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಆರೋಪಕ್ಕೊಳಗಾಗಿದ್ದ ನಟ ದರ್ಶನ್ ಬಳಿಕ ಕೋರ್ಟ್ ಆದೇಶದ ಮೇರೆಗೆ ಬಳ್ಳಾರಿ ಜೈಲಿಗೆ ವರ್ಗಾವಣೆಯಾಗಿದ್ದಾರೆ. ಕಳೆದ ನಾಲ್ಕು ದಿನಗಳಿಂದ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಖೈದಿಯಂತೇ ಕಾಲಕಳೆಯುತ್ತಿದ್ದಾರೆ.

ಆದರೆ ಇಲ್ಲಿ ಅವರಿಗೆ ಬೆನ್ನು ನೋವು ತೀವ್ರವಾಗಿ ಕಾಡುತ್ತಿದ್ದು, ಇದಕ್ಕಾಗಿ ತಮಗೆ ಸರ್ಜಿಕಲ್ ಚೇರ್ ನೀಡುವಂತೆ ದರ್ಶನ್ ಡಿಐಜಿ ಶೇಷ ಬಳಿ ಬೇಡಿಕೆಯಿಟ್ಟಿದ್ದರು. ಕಾನೂನಿನಲ್ಲಿ ಅವಕಾಶವಿದ್ದರೆ ನೀಡುವುದಾಗಿ ಡಿಐಜಿ ಶೇಷ ಮೊನ್ನೆಯಷ್ಟೇ ಮಾಧ್ಯಮಗಳಿಗೂ ಮಾಹಿತಿ ನೀಡಿದ್ದರು.

ಅದರಂತೆ ಈಗ ಅವರ ಬೇಡಿಕೆ ಈಡೇರಿದೆ. ದರ್ಶನ್ ಗೆ ಸರ್ಜಿಕಲ್ ಚೇರ್ ಇಂದು ಬಳ್ಳಾರಿ ಜೈಲಿಗೆ ತರಲಾಗಿದೆ. ಬಳಿಕ ದರ್ಶನ್ ಗೆ ಇದನ್ನು ಬಳಸಲು ಅನುಕೂಲ ಮಾಡಿಕೊಡಲಾಗಿದೆ. ಬೆನ್ನು ನೋವಿನಿಂದಾಗಿ ಇಂಡಿಯನ್ ಸ್ಟೈಲ್ ಟಾಯ್ಲೆಟ್ ನಲ್ಲಿ ಕೂರಲು ಕಷ್ಟವಾಗುತ್ತಿದೆ ಎಂದು ದರ್ಶನ್ ಜೈಲು ಅಧಿಕಾರಿಗಳ ಬಳಿ ಅಳಲು ತೋಡಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments