Webdunia - Bharat's app for daily news and videos

Install App

ಜೈಲು ಸೇರಿದರೂ ದರ್ಶನ್ ಗೆ ಬೇಡಿಕೆ ಕಡಿಮೆಯಾಗಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ

Darshan Thoogudeepa
Krishnaveni K
ಮಂಗಳವಾರ, 9 ಜುಲೈ 2024 (08:52 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದರೂ ಅವರಿಗಿರುವ ಕ್ರೇಜ್ ಕಡಿಮೆಯಾಗಿಲ್ಲ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ದರ್ಶನ್ ಜೈಲಿನಲ್ಲಿರುವಾಗಲೇ ಅವರ ಸಿನಿಮಾವೊಂದು ಮರು ಬಿಡುಗಡೆಯಾಗುತ್ತಿದೆ.

ದರ್ಶನ್ ಇಷ್ಟು ವರ್ಷದ ವೃತ್ತಿ ಜೀವನದಲ್ಲಿ ಅನೇಕ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಆ ಪೈಕಿ ಶಾಸ್ತ್ರಿ ಸಿನಿಮಾವೂ ಒಂದು. ವಿತರಕ ವಿಎಂ ಶಂಕರ್ ಶಾಸ್ತ್ರಿ ಸಿನಿಮಾವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ದರ್ಶನ್ ಜೈಲಿನಲ್ಲಿರುವಾಗಲೇ ಸಿನಿಮಾ ಮರು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಈ ಮೊದಲು ಕರ್ನಾಟಕದಲ್ಲಿ ಚಿತ್ರಮಂದಿರಗಳು ಬಣಗುಡುತ್ತಿರುವಾಗ ದರ್ಶನ್ ನಾಯಕರಾಗಿದ್ದ ಕಾಟೇರ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ಇದರಿಂದ ಎಷ್ಟೋ ಜನರ ಬದುಕಿಗೆ ದಾರಿಯಾಗಿತ್ತು. ಇದೀಗ ಚಿತ್ರರಂಗದಲ್ಲಿ ಪ್ರತೀ ವಾರ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗದೇ ನಷ್ಟ ಅನುಭವಿಸುತ್ತಿವೆ.

ಹೀಗಾಗಿ ಹಲವು ಹಳೆಯ ಸಿನಿಮಾಗಳನ್ನೇ ಮರು ಬಿಡುಗಡೆ ಮಾಡಲಾಗುತ್ತಿದೆ. ಇದೀಗ ದರ್ಶನ್ ಸಿನಿಮಾವನ್ನೂ ಅದೇ ರೀತಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ದರ್ಶನ್ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿರುವಾಗಲೂ ಜನ ಅವರನ್ನು ಸಿನಿಮಾವನ್ನು ನೋಡುತ್ತಾರಾ, ತಿರಸ್ಕರಿಸುತ್ತಾರಾ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments