ಬೆಂಗಳೂರು: ಮೈಕೊರೆಯುವ ಚಳಿಗಾಗಿ ಮನೆಯಿಂದ ತಂದುಕೊಟ್ಟಿರುವ ಹೆಚ್ಚುವರಿ ಕಂಬಳಿಯನ್ನ ನೀಡುವಂತೆ ಸೂಚಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ನ್ಯಾಯಾಲಯದಲ್ಲಿ ಮೊರೆಯಿಟ್ಟರು.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.
ಈ ವೇಳೆ ನಟ ದರ್ಶನ್, ತುಂಬಾನೇ ಚಳಿ ಇದೆ. ನಾವ್ಯಾರೂ ರಾತ್ರಿ ಮಲಗುತ್ತಿಲ್ಲ. ಹೆಚ್ಚುವರಿ ಕಂಬಳಿ ಕೊಡಿಸಿ ಎಂದು ಕೋರ್ಟ್ಗೆ ಮನವಿ ಮಾಡಿದರು.
ಈ ಮನವಿ ಬಳಿಕ ನ್ಯಾಯಾಧೀಶರು, ಪದೇ ಪದೇ ಆದೇಶ ಮಾಡಿದರೂ ಹೀಗ್ಯಾಕೆ ಮಾಡುತ್ತಾರೆ? ಚಳಿ ಇದ್ದಾಗ ಕಂಬಳಿ ಕೊಡಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು.
ದರ್ಶನ್ಗೆ ಕಂಬಳಿ ಕೊಡಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ ನ್ಯಾಯಾಧೀಶರು, ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 3ಕ್ಕೆ ಮುಂದೂಡಿದ್ದಾರೆ.