Webdunia - Bharat's app for daily news and videos

Install App

ಪದೇ ಪದೇ ಸ್ವಿಚ್ ಆಫ್ ಆಗುವ ಟಿವಿ ಬೇಡವೆಂದ ದರ್ಶನ್

Sampriya
ಬುಧವಾರ, 11 ಸೆಪ್ಟಂಬರ್ 2024 (18:36 IST)
ಬಳ್ಳಾರಿ: ಪರಪ್ಪನ ಅಗ್ರಹಾರದಲ್ಲಿ ವಿಐಪಿ ಟ್ರೀಟ್‌ಮೆಂಟ್ ಪಡೆದ ಆರೋಪದ ಮೇರೆಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್‌ ಅವರು ದಿನ ಕಳೆಯಲು ಕಷ್ಟಪಡುತ್ತಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿ 14ದಿನ ಕಳೆದಿರುವ ದರ್ಶನ್ ಅವರು ಇದೀಗ ಹತ್ಯೆ ಪ್ರಕರಣ ಚಾರ್ಜ್‌ಶೀಟ್‌ನಲ್ಲಿ ತನ್ನ ಪಾತ್ರದ ಬಗ್ಗೆ ಉಲ್ಲೇಖವಾಗಿರುವ ವಿಚಾರಗಳು ತಿಳಿದು ಶಾಕ್ ಆಗಿದ್ದಾರೆ ಎನ್ನಲಾಗಿದೆ.

ಜಾರ್ಜ್‌ಶೀಟ್‌ನ ವಿಷಯಗಳನ್ನು ತಿಳಿಯಲು ಸೆಲ್‌ನ ಒಳಗೆ ಟಿವಿ ಹಾಕಿಸಿಕೊಡುವಂತೆ ದರ್ಶನ್ ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದರು. ಇದೀಗ ನನಗೆ ಟಿವಿ ಬೇಡ, ತೆಗೆದುಕೊಂಡು ಹೋಗಿ ಎಂದು ಜೈಲಾಧಿಕಾರಿಗಳಿಗೆ ದರ್ಶನ್ ಹೇಳಿದ್ದಾರೆಂಬ ಮಾಹಿತಿಯಿದೆ.

ಟಿವಿಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ದರ್ಶನ್ ಟಿವಿ ನೋಡುತ್ತಿದ್ದಾಗ ಪದೇ ಪದೇ ಸ್ವಿಚ್‌ ಆಫ್‌ ಆಗುತ್ತಿತ್ತು ಮತ್ತು ಬ್ಲರ್‌ ಆಗಿ ಚಿತ್ರಗಳು ಕಾಣುತ್ತಿತ್ತು ಎನ್ನಲಾಗಿದೆ. ಟಿವಿಯನ್ನು ರಿಪೇರಿ ಅಥವಾ ಬೇರೆ ಟಿವಿ ಹಾಕಿಸಿಕೊಡಿ ಎಂದು ದರ್ಶನ್ ಜೈಲಾಧಿಕಾರಿಗಳ ಬಳಿ ಕೇಳಿಕೊಂಡಿದ್ದಾರೆ. ಈ ಮನವಿಗೆ ಜೈಲಾಧಿಕಾರಿಗಳು ಬೇರೆ ಟಿವಿ ಇಲ್ಲ ಎಂದು ಉತ್ತರಿಸಿದ್ದಾರೆ. ಇದೀಗ ನನಗೆ ಟಿವಿ ಬೇಡ ಎಂದು ದರ್ಶನ್ ಹೇಳಿರುವುದಾಗಿ ತಿಳಿದುಬಂದಿದೆ.

ಇತ್ತ ಮಾಧ್ಯಮಗಳಲ್ಲಿ ಚಾರ್ಜ್‌ಶೀಟ್‌ ಅಂಶಗಳು ಬಯಲಾಗುತ್ತಿದ್ದ ಹಾಗೇ  ಪತ್ನಿಗೆ ಜೈಲಿನ ದೂರವಾಣಿಯಲ್ಲಿ  ಕರೆ ಮಾಡಿ ಮಾತನಾಡಿದ್ದಾರೆ. ಇಂದು ಭೇಟಿಯಾಗುವಂತೆ ಪತ್ನಿ ಬಳಿ ಹೇಳಿದ್ದಾರೆ. ಆದರೆ ದಿಢೀರನೆ ವಿಜಯಲಕ್ಷ್ಮಿ ಅವರು ದರ್ಶನ್ ಭೇಟಿಯನ್ನು ರದ್ದು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments