Webdunia - Bharat's app for daily news and videos

Install App

ದರ್ಶನ್ ಪರಿಸ್ಥಿತಿಗೆ ರಚಿತಾ ರಾಮ್ ಮೇಲೆ ಅಭಿಮಾನಿಗಳ ಸಿಟ್ಟು ಯಾಕೆ

Krishnaveni K
ಮಂಗಳವಾರ, 27 ಆಗಸ್ಟ್ 2024 (11:49 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ಅಭಿಮಾನಿಗಳ ಸಿಟ್ಟು ರಚಿತಾ ರಾಮ್ ಮೇಲೆ ತಿರುಗಿದೆ.

ನಟ ದರ್ಶನ್ ಫೋಟೋ ವೈರಲ್ ಆದ ಬಳಿಕ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ತಯಾರಿ ನಡೆದಿದೆ. ಎಚ್ಚೆತ್ತುಕೊಂಡ ಸರ್ಕಾರ ಜೈಲಿನ ಕೆಲವು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಲ್ಲದೆ, ತಪಾಸಣೆಯನ್ನೂ ಮಾಡಿದೆ. ಇದೆಲ್ಲದಕ್ಕೂ ಈಗ ರಚಿತಾ ರಾಮ್ ಕಾರಣ ಎಂದು ದರ್ಶನ್ ಅಭಿಮಾನಿಗಳು ಸಿಟ್ಟಾಗಿದ್ದಾರೆ.

ಅಷ್ಟಕ್ಕೂ ರಚಿತಾ ಹೇಗೆ ಕಾರಣರಾಗುತ್ತಾರೆ ಎಂದು ನಿಮಗೆ ಪ್ರಶ್ನೆ ಮೂಡಬಹುದು. ಮೊನ್ನೆಯಷ್ಟೇ ರಚಿತಾ ರಾಮ್ ಜೈಲಿಗೆ ಬಂದು ದರ್ಶನ್ ರನ್ನು ಭೇಟಿ ಮಾಡಿಕೊಂಡು ಹೋಗಿದ್ದಾರೆ. ರಚಿತಾ ಜೊತೆ ಮಾತನಾಡಲು ದರ್ಶನ್ ತಮ್ಮ ಬ್ಯಾರಕ್ ಬಿಟ್ಟು ಹೊರಗೆ ಬಂದಿದ್ದಾರೆ. ರಚಿತಾ ಹೋದ ಮೇಲೆ ದರ್ಶನ್ ಬ್ಯಾರಕ್ ಗೆ ತೆರಳುವಾಗ ವಿಲ್ಸನ್ ಗಾರ್ಡನ್ ನಾಗ ಕರೆದಿದ್ದಾನೆ.

ಈ ಕಾರಣಕ್ಕೆ ದರ್ಶನ್ ಕೂಡಾ ಮಾತನಾಡಿಕೊಂಡು ಧಮ್ ಎಳೆದುಕೊಂಡು ಅಲ್ಲಿ ಕೂತಿದ್ದಾರೆ. ಇದನ್ನು ಜೈಲಿನಲ್ಲಿರುವ ನಾಗನ ವೈರಿಗಳೇ ಫೋಟೋ ಮಾಡಿ ಹರಿಯಬಿಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ರಚಿತಾ ಭೇಟಿಯಾಗಲೆಂದು ಹೊರಗೆ ಬಂದಿದ್ದಕ್ಕೇ ದರ್ಶನ್ ಗೆ ಈ ಗತಿ ಬಂದಿದೆ ಎಂದು ಅಭಿಮಾನಿಗಳು ಸಿಟ್ಟಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments