ದರ್ಶನ್‌ ಫ್ಯಾನ್ಸ್‌ ಈ ಕೆಲ್ಸ ಮಾಡ್ತಾ ಇದ್ದಾರೆ: ದಿವ್ಯಾ ವಸಂತ ತಾಯಿ ಕಣ್ಣೀರು

Sampriya
ಭಾನುವಾರ, 21 ಜುಲೈ 2024 (16:39 IST)
Photo Courtesy X
ಬೆಂಗಳೂರು: ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದ ಬಂಧಿಯಾಗಿರುವ ನಿರೂಪಕಿ, ನಟಿ ದಿವ್ಯಾ ವಸಂತ್ ತಾಯಿ ವಿಡಿಯೋ ಹಂಚಿಕೊಂಡು ಕಣ್ಣೀರು ಹಾಕಿದ್ದಾರೆ.

ದಿವ್ಯಾ ವಸಂತ್ ಸುಲಿಗೆ ಪ್ರಕರಣ ಬೆಳಕಿಗೆ ಬರುತ್ತಿದ್ದ ಹಾಗೇ ಸಾಮಾಜಿಕ ಜಾಲತಾಣದಲ್ಲಿ ದಿವ್ಯಾ ವಿಡಿಯೋಗಳನ್ನು ಟ್ರೋಲ್ ಮಾಡಲಾಗುತ್ತಿದೆ. ಅದಲ್ಲದೆ ಆಕೆಯ ವಿರುದ್ಧ ಆನೇಕ ಆರೋಪಗಳನ್ನು ಮಾಡಿ ಪ್ರಶ್ನಿಸುತ್ತಿದ್ದಾರೆ. ಇದರಿಂದ ಮನನೊಂದ ದಿವ್ಯಾ ಅವರ ತಾಯಿ ವಸಂತ ವಿಡಿಯೋ ಮಾಡಿ ದರ್ಶನ್‌ ಅಭಿಮಾನಿಗಳು ಹಾಗೂ ಟ್ರೋಲ್‌, ಕಮೆಂಟ್‌ ಮಾಡುವವರಿಗೆ ಮನವಿ ಮಾಡಿಕೊಂಡಿದ್ದಾರೆ.

ಕಣ್ಣೀರು ಹಾಕುತ್ತಲೇ ವಿಡಿಯೋ ಮಾಡಿರುವ ದಿವ್ಯಾ ವಸಂತ ತಾಯಿ 'ನನ್ನ ಮಗಳ ಬಗ್ಗೆ ಎಷ್ಟು ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಮಾತನಾಡಿರುವವರೆಲ್ಲಾ ದರ್ಶನ್‌ ಫ್ಯಾನ್ಸ್‌ಗಳೇ ಅಂತಾ ನನಗೆ ಗೊತ್ತು. ಅವಳು ತಪ್ಪು ಮಾಡಿದ್ದಾಳೋ ಇಲ್ಲವೋ ಎಂದು ದಿವ್ಯಾ ಬಂದ ಮೇಲೆ ಗೊತ್ತಾಗುತ್ತದೆ. ಅವಳ ಕೆಲಸ ಅವಳು ಮಾಡಿದ್ದಾಳೆ.

ದರ್ಶನ್ ಅವರು ಎಲ್ಲರಿಗೂ ಬೇಕಾಗಿರುವವರೇ. ನಮಗೂ ದರ್ಶನ್ ಅಂದ್ರೆ ಇಷ್ಟ, ನಮ್ಮ ಮಕ್ಕಳಿಗೂ ಇಷ್ಟ. ನನ್ನ ಮಗನಿಗೂ ಇಷ್ಟ. ಆಕೆಗೆ ಏನು ಕೆಲಸ ಕೊಟ್ಟಿದ್ದಾರೆ. ಅದನ್ನು ಮಾತ್ರ ದಿವ್ಯಾ ಮಾಡಿದ್ದಾಳೆ. ಅವರ ಬಗ್ಗೆ ಮಾತನಾಡಿರುವ ಕುರಿತು ಅವಳೇ ಬಂದು ಅದಕ್ಕೆ ಉತ್ತರ ಕೊಡುತ್ತಾಳೆ. ಅದುವರೆಗೂ ಕೆಟ್ಟದಾಗಿ ಏನೂ ವೈರಲ್ ಮಾಡಬೇಡಿ ಎಂದು ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments