Webdunia - Bharat's app for daily news and videos

Install App

ದರ್ಶನ್ ಫ್ಯಾನ್ಸ್ ಬಹಿಷ್ಕಾರದ ಅಭಿಯಾನಕ್ಕೆ ಕ್ಯಾರೇ ಎನ್ನದ ಜನ: ದುನಿಯಾ ವಿಜಯ್ ಮೊಗದಲ್ಲಿ ಖುಷಿ

Krishnaveni K
ಸೋಮವಾರ, 12 ಆಗಸ್ಟ್ 2024 (13:43 IST)
ಬೆಂಗಳೂರು: ನಟ ದರ್ಶನ್ ಅಭಿಮಾನಿಗಳು ತಮ್ಮ ಬಾಸ್ ಬಿಡುಗಡೆಯಾಗುವವರೆಗೂ ಯಾವುದೇ ಕನ್ನಡ ಸಿನಿಮಾಗಳನ್ನು ನೋಡಬೇಡಿ ಎಂದು ಬಹಿಷ್ಕಾರ ಅಭಿಯಾನ ಮಾಡಿದರೂ ದುನಿಯಾ ವಿಜಯ್ ನಿರ್ದೇಶಿಸಿ, ನಟಿಸಿದ್ದ ಭೀಮ ಸಿನಿಮಾ ಗೆದ್ದು ಬೀಗಿದೆ.

ನಟ ದರ್ಶನ್ ಅರೆಸ್ಟ್ ಆದ ಬಳಿಕ ಅವರ ಅಭಿಮಾನಿಗಳ ಆಕ್ರೋಶ ಮಿತಿ ಮೀರಿದೆ. ಇತ್ತೀಚೆಗೆ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಬಾಸ್ ಬಿಡುಗಡೆಯಾಗುವವರೆಗೂ ಕನ್ನಡದ ಯಾರ ಸಿನಿಮಾವನ್ನೂ ನೋಡಲು ಥಿಯೇಟರ್ ಗೆ ಹೋಗಬೇಡಿ ಎಂದು ಅಭಿಯಾನವನ್ನೇ ಮಾಡಿದ್ದರು.

ಅದರಲ್ಲೂ ವಿಶೇಷವಾಗಿ ಧ್ರುವ ಸರ್ಜಾ ನಾಯಕರಾಗಿರುವ ಮಾರ್ಟಿನ್ ಮತ್ತು ದುನಿಯಾ ವಿಜಯ್ ನಾಯಕರಾಗಿರುವ ಭೀಮ ಸಿನಿಮಾ ವಿರುದ್ಧವೂ ಅಭಿಯಾನ ಮಾಡಿದ್ದರು. ಧ್ರುವ ಮತ್ತು ದರ್ಶನ್ ಅಭಿಮಾನಿಗಳ ನಡುವೆಯಂತೂ ವಾರ್ ಆಗಿತ್ತು. ಆದರೆ ಅಭಿಮಾನಿಗಳ ಅಭಿಯಾನದ ನಡುವೆಯೂ ದುನಿಯಾ ವಿಜಯ್ ನಾಯಕರಾಗಿರುವ ಭೀಮ ಸಿನಿಮಾ ಗೆದ್ದಿದೆ.

ಭೀಮ ಸಿನಿಮಾ ವೀಕೆಂಡ್ ನಲ್ಲಿ ಉತ್ತಮ ಗಳಿಕೆ ಮಾಡಿದೆ. ಶುಕ್ರವಾರ ಬಿಡುಗಡೆಯಾಗಿದ್ದ ಭೀಮ ಸಿನಿಮಾ ಇದೀಗ ಬಿಡುಗಡೆಯಾದ ಮೂರೇ ದಿನಕ್ಕೆ 11 ಕೋಟಿ ರೂ. ಗಳಿಕೆ ಮಾಡಿದೆ. ಆ ಮೂಲಕ ವಿರೋಧದ ಅಭಿಯಾನದ ನಡುವೆ ಭೀಮ ಗೆದ್ದಿದ್ದಾನೆ. ಬಹಳ ದಿನಗಳ ನಂತರ ಬಿಡುಗಡೆಯಾದ ಸ್ಟಾರ್ ಸಿನಿಮಾವಿದು. ಹೀಗಾಗಿ ಜನ ಥಿಯೇಟರ್ ಗೆ ಬಂದು ಸಿನಿಮಾ ನೋಡಿ ಚಿತ್ರ ಗೆಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ಮುಂದಿನ ಸುದ್ದಿ
Show comments