Webdunia - Bharat's app for daily news and videos

Install App

ಬೇರೆ ನಟರನ್ನು ನಿಂದಿಸಬೇಡಿ ಎಂದರೂ ಕ್ಯಾರೇ ಮಾಡದ ದರ್ಶನ್ ಫ್ಯಾನ್ಸ್: ಧ್ರುವ ಸರ್ಜಾ, ದುನಿಯಾ ವಿಜಿಗೆ ಸವಾಲು

Krishnaveni K
ಬುಧವಾರ, 30 ಅಕ್ಟೋಬರ್ 2024 (14:41 IST)
ಬೆಂಗಳೂರು: ನಟ ದರ್ಶನ್ ಗೆ ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಧ್ಯಂತರ ಜಾಮೀನು ಸಿಕ್ಕಿದೆ ಎಂಬ ಸುದ್ದಿ ಕೇಳಿದ ತಕ್ಷಣ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಇದೇ ಸಂಭ್ರಮದಲ್ಲಿ ಈಗ ಬೇರೆ ನಟರು, ಪತ್ರಕರ್ತರನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲು ಶುರು ಮಾಡಿದ್ದಾರೆ.

ದರ್ಶನ್ ಬಿಡುಗಡೆಯಾಗುತ್ತಾರೆ ಎಂದ ತಕ್ಷಣ ಅವರ ಅಧಿಕೃತ ಫ್ಯಾನ್ಸ್ ಪೇಜ್ ನಿಂದ ಯಾವ ನಟರಿಗೂ ನಿಂದಿಸಬೇಡಿ. ಯಾರನ್ನೂ ದೂಷಿಸಬೇಡಿ ಎಂದು ಮನವಿ ಮಾಡಲಾಗಿತ್ತು. ಆದರೆ ಇದಕ್ಕೆ ದರ್ಶನ್ ಅಭಿಮಾನಿಗಳು ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಯಥಾ ಪ್ರಕಾರ ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್ ಈಗ ಕೆಲವು ಆಕ್ರೋಶದ ಟ್ವೀಟ್ ಮಾಡಲು ಶುರು ಮಾಡಿದ್ದಾರೆ.

ಓರ್ವ ಅಭಿಮಾನಿ ಈ ಹಿಂದೆ ದರ್ಶನ್ ಅರೆಸ್ಟ್ ಆಗಿರುವ ಬಗ್ಗೆ ಕೇಳಿದಾಗ ಧ್ರುವ ಸರ್ಜಾ, ದುನಿಯಾ ವಿಜಯ್ ಮತ್ತು ಪತ್ರಕರ್ತ ಅಜಿತ್ ಹನುಮಕ್ಕನವರ್ ಮುಂತಾದವರ ವಿಡಿಯೋ ಕ್ರಿಯೇಟ್ ಮಾಡಿ ಇನ್ಮೇಲೆ ನಿಮಗಿದೆ ಹಬ್ಬ. ದರ್ಶನ್ ಹೇಟರ್ಸ್ ಎಲ್ಲರೂ ಇನ್ನು ಮುಖ ಮುಚ್ಚಿಕೊಳ್ಳಬೇಕು ಎಂದು ಸವಾಲೆಸೆದಿದ್ದಾರೆ.

ಇವರೆಲ್ಲೂ ಇನ್ಮುಂದೆ ಪಬ್ಲಿಕ್ ಆಗಿ ಕಾಣಿಸಿಕೊಳ್ಳದೇ ಇರುವುದು ಅವರ ಆರೋಗ್ಯಕ್ಕೆ ಉತ್ತಮ ಎಂದು ದರ್ಶನ್ ಫ್ಯಾನ್ಸ್ ಎಚ್ಚರಿಸಿದ್ದಾರೆ. ಯಾವುದೇ ಸೆಲೆಬ್ರೇಷನ್ ನಲ್ಲಿ ಇನ್ಮುಂದೆ ಕಾಣಿಸಿಕೊಳ್ಳಬೇಡಿ ಎಂದಿದ್ದಾರೆ. ಇನ್ನು, ದರ್ಶನ್ ಬಿಡುಗಡೆಯಾಗುತ್ತಾರೆಂಬ ನಿರೀಕ್ಷೆಯಲ್ಲಿ ಬಳ್ಳಾರಿ ಜೈಲಿನ ಮುಂದೆ ಫ್ಯಾನ್ಸ್ ಜಮಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments