Webdunia - Bharat's app for daily news and videos

Install App

ಬೆಂಗಳೂರಲ್ಲಿ ಭೇಟಿಯಾಗೋಣ, ಬಳ್ಳಾರಿ ಜೈಲಲ್ಲಿರುವ ದರ್ಶನ್ ಗೆ ಎಂಥಾ ಕಾನ್ಫಿಡೆನ್ಸ್ ನೋಡಿ

Krishnaveni K
ಸೋಮವಾರ, 28 ಅಕ್ಟೋಬರ್ 2024 (11:35 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ಕಳೆಯುತ್ತಿದ್ದಾರೆ. ಆದರೆ ಅವರಲ್ಲಿ ಎಂಥಾ ಕಾನ್ಫಿಡೆನ್ಸ್ ಇದೆ ಎನ್ನುವುದು ಈ ಮಾತಿನಿಂದಲೇ ಸ್ಪಷ್ಟವಾಗುತ್ತದೆ.

ನಟ ದರ್ಶನ್ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅವರ ಜಾಮೀನು ಅರ್ಜಿಯ ತೀರ್ಪು ಇಂದು ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಇಂದು ಅವರ ಬೆನ್ನು ನೋವಿನ ಸಮಸ್ಯೆಯ ನೆಪವೊಡ್ಡಿ ವಕೀಲ ಸಿವಿ ನಾಗೇಶ್ ಜಾಮೀನಿಗಾಗಿ ವಾದ ಮಂಡಿಸಲಿದ್ದಾರೆ.

ಒಂದೆಡೆ ದರ್ಶನ್ ಗೆ ಬೆನ್ನು ನೋವು ತೀವ್ರವಾಗಿ ಕಾಡುತ್ತಿದ್ದು ಎದ್ದು ಓಡಾಡಲೂ ಕಷ್ಟವಾಗಿದೆ. ಅವರ ಪರಿಸ್ಥಿತಿ ನೋಡಿ ಸ್ಯಾಂಡಲ್ ವುಡ್ ನ ಸ್ನೇಹಿತರು ಬಳ್ಳಾರಿ ಜೈಲಿಗೆ ಬರುವುದಾಗಿ ಆಗ್ರಹಿಸುತ್ತಿದ್ದಾರಂತೆ. ಆದರೆ ಇವರೆಲ್ಲರಿಗೂ ದರ್ಶನ್ ಬರಬೇಡಿ ಎಂದು ಸಂದೇಶ ಕಳುಹಿಸಿದ್ದಾರೆ. ಇದಕ್ಕೆ ಕಾರಣವೂ ಇದೆ.

ನನಗೆ ಸದ್ಯದಲ್ಲೇ ಬೇಲ್ ಆಗುತ್ತದೆ ಎನ್ನುವ ವಿಶ್ವಾಸ ದರ್ಶನ್ ಗಿದೆ. ಆರೋಗ್ಯದ ನೆಪದಲ್ಲಿ ಜಾಮೀನು ಸಿಗಬಹುದು ಎಂದು ಅವರು ಭರವಸೆಯಲ್ಲಿದ್ದಾರೆ. ಹೀಗಾಗಿ ಸದ್ಯದಲ್ಲೇ ಬೆಂಗಳೂರಿಗೆ ಬರುತ್ತೇನೆ, ನೀವು ಯಾರೂ ಇಲ್ಲಿಗೆ ಬರಬೇಡಿ ಎಂದು ದರ್ಶನ್ ತಮ್ಮ ಸಿನಿ ಸ್ನೇಹಿತರಿಗೆ ಸಂದೇಶ ನೀಡಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments