Webdunia - Bharat's app for daily news and videos

Install App

ದರ್ಶನ್ ತಪಾಸಣೆಗೆ ಬಂದ ವೈದ್ಯರು: ಅವರು ಕೊಡುವ ವರದಿಯಲ್ಲಿದೆ ದಾಸನ ಭವಿಷ್ಯ

Krishnaveni K
ಶುಕ್ರವಾರ, 11 ಅಕ್ಟೋಬರ್ 2024 (14:16 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಜಾಮೀನು ತೀರ್ಪು ಸೋಮವಾರ ಪ್ರಕಟವಾಗಲಿದೆ. ಒಂದು ವೇಳೆ ಅವರಿಗೆ ಜಾಮೀನು ಸಿಗದೇ ಇದ್ದರೆ ಬೆಂಗಳೂರಿನ ಜೈಲಿಗಾದರೂ ಶಿಫ್ಟ್ ಮಾಡಿಸಬೇಕು ಎಂದು ಅವರು ಪ್ರಯತ್ನಿಸುತ್ನಿದ್ದಾರೆ.

ದರ್ಶನ್ ಗೆ ಮುಖ್ಯವಾಗಿ ಪ್ಲಸ್ ಪಾಯಿಂಟ್ ಆಗಿರುವುದು ಅವರ ಬೆನ್ನು ನೋವು. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಇದೇ ಕಾರಣವನ್ನಿಟ್ಟುಕೊಂಡು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿಸಲು ನ್ಯಾಯಾಧೀಶರ ಮುಂದೆ ಮನವಿ ಮಾಡಲಿದ್ದಾರೆ. ಇದಕ್ಕಾಗಿ ಅವರ ವೈದ್ಯಕೀಯ ಪರೀಕ್ಷೆ ಕೋರ್ಟ್ ಗೆ ಸಲ್ಲಿಸಬೇಕಾಗುತ್ತದೆ.

ಬಳ್ಳಾರಿ ಜೈಲಿನಲ್ಲೇ ವೈದ್ಯಾಧಿಕಾರಿಗಳು ಬಂದು ತಪಾಸಣೆ ಮಾಡಿದ್ದು ದರ್ಶನ್ ಗೆ ಸ್ಕ್ಯಾನಿಂಗ್ ಮತ್ತು ಶಸ್ತ್ರಚಿಕಿತ್ಸೆಗೊಳಗಾಗುವಂತೆ ಹೇಳಿದ್ದರು. ಆದರೆ ವೈದ್ಯರ ಸಲಹೆ ಒಪ್ಪದ ದರ್ಶನ್ ಏನೇ ಇದ್ದರೂ ಬೆಂಗಳೂರಿನಲ್ಲೇ ಮಾಡಿಸಿಕೊಳ್ಳುವುದಾಗಿ ಹಠ ಹಿಡಿದಿದ್ದಾರೆ.

ಇದರ ನಡುವೆ ಅವರಿಗೆ ತೀವ್ರ ಬೆನ್ನು ನೋವು ಕಾಡುತ್ತಿದ್ದು ಮೊನ್ನೆ ಆರ್ಥೋಪೆಡಿಕ್ ಸರ್ಜನ್ ಮತ್ತು ಇಂದು ನ್ಯೂರೋ ತಜ್ಞ ಭೇಟಿ ಜೈಲಿಗೆ ನೀಡಿ ತಪಾಸಣೆ ನಡೆಸಿದ್ದಾರೆ. ಇಂದು ತಪಾಸಣೆ ಬಳಿಕ ದರ್ಶನ್ ಆರೋಗ್ಯ ಸ್ಥಿತಿಯ ಬಗ್ಗೆ ಅವರು ವರದಿ ತಯಾರಿಸಿ ಕೋರ್ಟ್ ಗೆ ಸಲ್ಲಿಸಲಿದ್ದಾರೆ.

ಆ ವರದಿಯ ಅನ್ವಯ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಬೇಕೋ ಬೇಡವೋ ಎಂಬ ಬಗ್ಗೆ ತೀರ್ಮಾನವಾಗಲಿದೆ. ಒಂದು ವೇಳೆ ಸೋಮವಾರ ಜಾಮೀನು ಸಿಗದೇ ಇದ್ದರೆ ವೈದ್ಯಕೀಯ ವರದಿ ಅನ್ವಯ ದಾಸ ಬಳ್ಳಾರಿ ಜೈಲಿನಿಂದ ಮತ್ತೆ ಬೆಂಗಳೂರಿಗೆ ಶಿಫ್ಟ್ ಆಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments