Webdunia - Bharat's app for daily news and videos

Install App

ದರ್ಶನ್ ತಪಾಸಣೆಗೆ ಬಂದ ವೈದ್ಯರು: ಅವರು ಕೊಡುವ ವರದಿಯಲ್ಲಿದೆ ದಾಸನ ಭವಿಷ್ಯ

Krishnaveni K
ಶುಕ್ರವಾರ, 11 ಅಕ್ಟೋಬರ್ 2024 (14:16 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಜಾಮೀನು ತೀರ್ಪು ಸೋಮವಾರ ಪ್ರಕಟವಾಗಲಿದೆ. ಒಂದು ವೇಳೆ ಅವರಿಗೆ ಜಾಮೀನು ಸಿಗದೇ ಇದ್ದರೆ ಬೆಂಗಳೂರಿನ ಜೈಲಿಗಾದರೂ ಶಿಫ್ಟ್ ಮಾಡಿಸಬೇಕು ಎಂದು ಅವರು ಪ್ರಯತ್ನಿಸುತ್ನಿದ್ದಾರೆ.

ದರ್ಶನ್ ಗೆ ಮುಖ್ಯವಾಗಿ ಪ್ಲಸ್ ಪಾಯಿಂಟ್ ಆಗಿರುವುದು ಅವರ ಬೆನ್ನು ನೋವು. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಇದೇ ಕಾರಣವನ್ನಿಟ್ಟುಕೊಂಡು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿಸಲು ನ್ಯಾಯಾಧೀಶರ ಮುಂದೆ ಮನವಿ ಮಾಡಲಿದ್ದಾರೆ. ಇದಕ್ಕಾಗಿ ಅವರ ವೈದ್ಯಕೀಯ ಪರೀಕ್ಷೆ ಕೋರ್ಟ್ ಗೆ ಸಲ್ಲಿಸಬೇಕಾಗುತ್ತದೆ.

ಬಳ್ಳಾರಿ ಜೈಲಿನಲ್ಲೇ ವೈದ್ಯಾಧಿಕಾರಿಗಳು ಬಂದು ತಪಾಸಣೆ ಮಾಡಿದ್ದು ದರ್ಶನ್ ಗೆ ಸ್ಕ್ಯಾನಿಂಗ್ ಮತ್ತು ಶಸ್ತ್ರಚಿಕಿತ್ಸೆಗೊಳಗಾಗುವಂತೆ ಹೇಳಿದ್ದರು. ಆದರೆ ವೈದ್ಯರ ಸಲಹೆ ಒಪ್ಪದ ದರ್ಶನ್ ಏನೇ ಇದ್ದರೂ ಬೆಂಗಳೂರಿನಲ್ಲೇ ಮಾಡಿಸಿಕೊಳ್ಳುವುದಾಗಿ ಹಠ ಹಿಡಿದಿದ್ದಾರೆ.

ಇದರ ನಡುವೆ ಅವರಿಗೆ ತೀವ್ರ ಬೆನ್ನು ನೋವು ಕಾಡುತ್ತಿದ್ದು ಮೊನ್ನೆ ಆರ್ಥೋಪೆಡಿಕ್ ಸರ್ಜನ್ ಮತ್ತು ಇಂದು ನ್ಯೂರೋ ತಜ್ಞ ಭೇಟಿ ಜೈಲಿಗೆ ನೀಡಿ ತಪಾಸಣೆ ನಡೆಸಿದ್ದಾರೆ. ಇಂದು ತಪಾಸಣೆ ಬಳಿಕ ದರ್ಶನ್ ಆರೋಗ್ಯ ಸ್ಥಿತಿಯ ಬಗ್ಗೆ ಅವರು ವರದಿ ತಯಾರಿಸಿ ಕೋರ್ಟ್ ಗೆ ಸಲ್ಲಿಸಲಿದ್ದಾರೆ.

ಆ ವರದಿಯ ಅನ್ವಯ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಬೇಕೋ ಬೇಡವೋ ಎಂಬ ಬಗ್ಗೆ ತೀರ್ಮಾನವಾಗಲಿದೆ. ಒಂದು ವೇಳೆ ಸೋಮವಾರ ಜಾಮೀನು ಸಿಗದೇ ಇದ್ದರೆ ವೈದ್ಯಕೀಯ ವರದಿ ಅನ್ವಯ ದಾಸ ಬಳ್ಳಾರಿ ಜೈಲಿನಿಂದ ಮತ್ತೆ ಬೆಂಗಳೂರಿಗೆ ಶಿಫ್ಟ್ ಆಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments