ಕೋರ್ಟ್ ಗೆ ಬಂದ ದರ್ಶನ್ ಗೆ ಅಭಿಮಾನಿಗಳೇ ಬೆಂಗಾವಲು ಪಡೆ: ವಿಡಿಯೋ

Krishnaveni K
ಮಂಗಳವಾರ, 25 ಫೆಬ್ರವರಿ 2025 (13:05 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಇಂದು ಬಿಗಿ ಭದ್ರತೆಯಲ್ಲಿ ಕೋರ್ಟ್ ಗೆ ಹಾಜರಾಗಿದ್ದಾರೆ. ಅವರಿಗೆ ಅಭಿಮಾನಿಗಳೇ ಬೆಂಗಾವಲು ಪಡೆಯಾಗಿದ್ದು ವಿಶೇಷವಾಗಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ರೆಗ್ಯುಲರ್ ಜಾಮೀನು ಸಿಕ್ಕಿದೆ. ಆದರೆ ಜಾಮೀನು ನೀಡುವಾಗ ಪ್ರತೀ ತಿಂಗಳೂ ಕೋರ್ಟ್ ಗೆ ಖುದ್ದಾಗಿ ಹಾಜರಾಗಲು ನ್ಯಾಯಾಧೀಶರು ಆದೇಶಿಸಿದ್ದರು.

ಅದರಂತೆ ಇಂದು ನಟ ದರ್ಶನ್ ಬೆಂಗಳೂರಿನ 57 ನೇ ಸಿಸಿಎಚ್ ಕೋರ್ಟ್ ಗೆ ಹಾಜರಾದರು. ದರ್ಶನ್ ಬರುವ ಹಿನ್ನಲೆಯಲ್ಲಿ ಸಾಕಷ್ಟು ಅಭಿಮಾನಿಗಳು ಕೋರ್ಟ್ ಹೊರಗೆ ಜಮಾಯಿಸಿದ್ದರು. ಹೀಗಾಗಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.

ದರ್ಶನ್ ಕಾರಿನ ಹಿಂದೆಯೇ ಅವರ ಬೆಂಬಲಿಗರೂ ಬೆಂಗಾವಲು ಪಡೆಯಂತೆ ಹಿಂಬಾಲಿಸಿದ್ದು ವಿಶೇಷವಾಗಿತ್ತು. ಬಳಿಕ ಅಭಿಮಾನಿಗಳತ್ತ ಕೈ ಬೀಸಿ ನಗುತ್ತಲೇ ದರ್ಶನ್ ಕೋರ್ಟ್ ಒಳಗೆ ಹೋದರು. ಆದರೆ ಯಾರೊಂದಿಗೂ ಏನೂ ಮಾತನಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments