Webdunia - Bharat's app for daily news and videos

Install App

ಕೋರ್ಟ್ ಗೆ ಬಂದ ದರ್ಶನ್ ಗೆ ಅಭಿಮಾನಿಗಳೇ ಬೆಂಗಾವಲು ಪಡೆ: ವಿಡಿಯೋ

Krishnaveni K
ಮಂಗಳವಾರ, 25 ಫೆಬ್ರವರಿ 2025 (13:05 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಇಂದು ಬಿಗಿ ಭದ್ರತೆಯಲ್ಲಿ ಕೋರ್ಟ್ ಗೆ ಹಾಜರಾಗಿದ್ದಾರೆ. ಅವರಿಗೆ ಅಭಿಮಾನಿಗಳೇ ಬೆಂಗಾವಲು ಪಡೆಯಾಗಿದ್ದು ವಿಶೇಷವಾಗಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ರೆಗ್ಯುಲರ್ ಜಾಮೀನು ಸಿಕ್ಕಿದೆ. ಆದರೆ ಜಾಮೀನು ನೀಡುವಾಗ ಪ್ರತೀ ತಿಂಗಳೂ ಕೋರ್ಟ್ ಗೆ ಖುದ್ದಾಗಿ ಹಾಜರಾಗಲು ನ್ಯಾಯಾಧೀಶರು ಆದೇಶಿಸಿದ್ದರು.

ಅದರಂತೆ ಇಂದು ನಟ ದರ್ಶನ್ ಬೆಂಗಳೂರಿನ 57 ನೇ ಸಿಸಿಎಚ್ ಕೋರ್ಟ್ ಗೆ ಹಾಜರಾದರು. ದರ್ಶನ್ ಬರುವ ಹಿನ್ನಲೆಯಲ್ಲಿ ಸಾಕಷ್ಟು ಅಭಿಮಾನಿಗಳು ಕೋರ್ಟ್ ಹೊರಗೆ ಜಮಾಯಿಸಿದ್ದರು. ಹೀಗಾಗಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.

ದರ್ಶನ್ ಕಾರಿನ ಹಿಂದೆಯೇ ಅವರ ಬೆಂಬಲಿಗರೂ ಬೆಂಗಾವಲು ಪಡೆಯಂತೆ ಹಿಂಬಾಲಿಸಿದ್ದು ವಿಶೇಷವಾಗಿತ್ತು. ಬಳಿಕ ಅಭಿಮಾನಿಗಳತ್ತ ಕೈ ಬೀಸಿ ನಗುತ್ತಲೇ ದರ್ಶನ್ ಕೋರ್ಟ್ ಒಳಗೆ ಹೋದರು. ಆದರೆ ಯಾರೊಂದಿಗೂ ಏನೂ ಮಾತನಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments