Webdunia - Bharat's app for daily news and videos

Install App

ದರ್ಶನ್ ಜೈಲು ಸೇರಿ 3 ತಿಂಗಳು, ಇನ್ನಾದರೂ ಸಿಗುತ್ತಾ ಬಿಡುಗಡೆ ಭಾಗ್ಯ

Sampriya
ಭಾನುವಾರ, 8 ಸೆಪ್ಟಂಬರ್ 2024 (13:09 IST)
Photo Courtesy X
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿ ಇಂದಿಗೆ ಮೂರು ತಿಂಗಳಾಯಿತು. ಈಗಾಗಲೇ ಆರೋಪಿಗಳ ವಿರುದ್ಧದ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದು ನಾಳೆ ದರ್ಶನ್ ಸೇರಿದಂತೆ ಇತರ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

24ನೇ ಎಸಿಎಂಎ ಕೋರ್ಟ್‌ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರ ಸೇರಿದಂತೆ ವಿವಿಧ ಜೈಲಿನಿಂದ ಎಲ್ಲ ಆರೋಪಿಗಳು ಹಾಜರಾಗಲಿದ್ದಾರೆ. ಆರೋಪಿಗಳ ಪರ ವಕೀಲರಿಗೆ ಜಾರ್ಜ್‌ಶೀಟ್ ಕೈಸೇರುತ್ತಿದ್ದ ಹಾಗೇ ಕೆಲವು ಆರೋಪಿಗಳಿಂದ ಜಾಮೀನಿಗೆ ಅರ್ಜಿ ಸಾಧ್ಯತೆ ಇದೆ. ಮುಖ್ಯವಾಗಿ ಎ2 ಆರೋಪಿ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಚಿತ್ರದುರ್ಗಾದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಿ ಡಿ ಗ್ಯಾಂಗ್ ಕೊಲೆ ಮಾಡಿ, ಮೊರಿ ಬಳಿ ಬಿಸಾಡಿತ್ತು. ಈ ಪ್ರಕರಣವನ್ನು ಮುಚ್ಚಿ ಹಾಕಲು ಹಾಗೂ ಕೃತ್ಯದಲ್ಲಿ ದರ್ಶನ್ ಭಾಗಿಯಾಗಿರುವುದು ಚಾರ್ಜ್‌ಶೀಟ್‌ನಲ್ಲಿ ದೃಢವಾಗಿದೆ. ಇದೀಗ ದರ್ಶನ್ ಅವರು ಜೈಲು ಸೇರಿ ಮೂರು ತಿಂಗಳಾಗಿದ್ದು, ಪತಿಯನ್ನು ಈ ಪ್ರಕರಣದಿಂದ ಹೊರತರಲು ಪತ್ನಿ ವಿಜಯಲಕ್ಷ್ಮೀ ಕಾನೂನು ಹೋರಾಟದ ಜತೆ ದೇವರ ಮೊರೆ ಹೋಗುತ್ತಿದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್ ಅವರನ್ನು ಜಾರ್ಜ್‌ಶೀಟ್ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿದ್ದು, ಈ ವೇಳೆ ಅವರು ತಂದಿರುವ ಪತ್ರಗಳು ಕುತೂಹಲ ಹುಟ್ಟಿಸಿತ್ತು. ಅದು ಚಾರ್ಜ್‌ಶೀಟ್ ಸಂಬಂಧಿಸಿದ್ದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments