ಲಾಯರ್ ಜೊತೆ ಮೀಟಿಂಗ್ ಬಳಿಕ ದರ್ಶನ್ ಮುಖದಲ್ಲಿ ನಗು: ಅಣ್ಣಂಗೆ ಬೇಲ್ ಫಿಕ್ಸ್

Krishnaveni K
ಬುಧವಾರ, 25 ಸೆಪ್ಟಂಬರ್ 2024 (14:40 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ರನ್ನು ಇಂದು ವಕೀಲರ ತಂಡ ಬಳ್ಳಾರಿ ಜೈಲಿನಲ್ಲಿ ಭೇಟಿ ಮಾಡಿದ್ದು, ಬಳಿಕ ಅವರ ಮುಖದಲ್ಲಿ ನಗು, ನಿರಾಳತೆ ಕಂಡುಬಂದಿದೆ.

ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ರನ್ನು ಇಂದು ವಕೀಲರ ತಂಡ ಭೇಟಿ ಮಾಡಿದೆ. ದರ್ಶನ್ ಪರ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿರುವ ವಕೀಲರ ತಂಡ ಇಂದು ಸತತ ಎರಡನೇ ಬಾರಿಗೆ ಬಳ್ಳಾರಿ ಜೈಲಿಗೆ ಭೇಟಿ ಕೊಟ್ಟಿತ್ತು. ಇಂದು ದರ್ಶನ್ ಜೊತೆ ಸುದೀರ್ಘ ಸಮಯ ಮಾತುಕತೆಯನ್ನೂ ನಡೆಸಿದೆ.

ಇದಾದ ಬಳಿಕ ತಮ್ಮ ಬ್ಯಾರಕ್ ಗೆ ತೆರಳುವಾಗ ಜೊತೆಗಿದ್ದ ಪೊಲೀಸ್ ಅಧಿಕಾರಿಯ ಜೊತೆ ನಗು ನಗುತ್ತಾ ಮಾತನಾಡುತ್ತಾ ಸಾಗಿದ ದರ್ಶನ್ ಮುಖದಲ್ಲಿ ನಿರಾಳತೆ ಕಾಣಿಸಿದೆ. ಜಾಮೀನು ಪಡೆಯುವ  ವಿಚಾರವಾಗಿ ವಕೀಲರು ದರ್ಶನ್ ಜೊತೆ ಮಾತುಕತೆ ನಡೆಸಿದ್ದು, ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಹೀಗಾಗಿ ದರ್ಶನ್ ಕೂಡಾ ನಿರಾಳವಾಗಿದ್ದರು. ಇನ್ನು, ದರ್ಶನ್ ಸಂತೋಷದಿಂದ ತೆರಳುತ್ತಿರುವ ದೃಶ್ಯಗಳನ್ನು ನೋಡಿದ ಅವರ ಅಭಿಮಾನಿಗಳೂ ಅಣ್ಣಂಗೆ ಈ ಬಾರಿ ಬೇಲ್ ಫಿಕ್ಸ್ ಎಂದಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ಮೂವರಿಗೆ ಬೇಲ್ ಆಗಿದೆ. ಹೀಗಾಗಿ ತಮಗೂ ರಿಲೀಫ್ ಸಿಗಬಹುದು ಎಂಬ ವಿಶ್ವಾಸ ದರ್ಶನ್ ರಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments