Webdunia - Bharat's app for daily news and videos

Install App

ಹೊಸ ಜೈಲಿನಲ್ಲಿ ಹೇಗಿತ್ತು ದರ್ಶನ್ ದಿನಚರಿ

Krishnaveni K
ಶುಕ್ರವಾರ, 30 ಆಗಸ್ಟ್ 2024 (10:15 IST)
ಬಳ್ಳಾರಿ: ಪರಪ್ಪನ ಅಗ್ರಹಾರದಿಂದ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ನಟ ದರ್ಶನ್ ಹೊ ಜೈಲಿಗೆ ಬಂದ ಮೇಲೆ ದಿನಚರಿ ಹೇಗಿತ್ತು ಎಂಬ ವಿವರ ಇಲ್ಲಿದೆ ನೋಡಿ.

ದರ್ಶನ್ ನಿನ್ನೆ ಬೆಳಿಗ್ಗೆ ಬಳ್ಳಾರಿ ಜೈಲಿಗೆ ಬಂದಿದ್ದರು. ಬೆಳಗ್ಗಿನ ಉಪಾಹರವನ್ನು ಅವರು ಸ್ವೀಕರಿಸಿರಲಿಲ್ಲ. ಮಧ್ಯಾಹ್ನವೂ ಅವರು ಊಟ ಮಾಡಿರಲಿಲ್ಲ. ಆದರೆ ಸಂಜೆ 6 ಗಂಟೆಗೆ ನೀಡುವ ಆಹಾರವನ್ನು 4.30 ಕ್ಕೇ ಸೇವಿಸಿ ತಮ್ಮ ಕೊಠಡಿ ಸೇರಿಕೊಂಡಿದ್ದಾರೆ. 6 ಗಂಟೆಗೆ ಅವರ ಬ್ಯಾರಕ್ ಬಾಗಿಲು ಬಂದ್ ಮಾಡಲಾಗುತ್ತದೆ.

ರಾತ್ರಿಯಿಡೀ ನಿದ್ರೆಯಿಲ್ಲದೇ ದರ್ಶನ್ ಕಳೆದಿದ್ದಾರೆ ಎಂದು ತಿಳಿದುಬಂದಿದೆ. ಹೊಸ ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಅವರು ಕಷ್ಟಪಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರಿಗೆ ರೌಡಿಗಳ ಕೃಪೆಯಿಂದ ರಾಜಾತಿಥ್ಯ ಸಿಗುತ್ತಿತ್ತು. ಆದರೆ ಇಲ್ಲಿ ಕಟ್ಟುನಿಟ್ಟಾಗಿ ಜೈಲು ನಿಯಮ ಪಾಲಿಸಲು ಹಿರಿಯ ಅಧಿಕಾರಿಗಳೇ ಸೂಚನೆ ನೀಡಿದ್ದಾರೆ.

ಜೈಲಿನ ಅಧಿಕಾರಿಗಳಿಗೂ ಯಾವುದೇ ಉಪಕಾರ ಮಾಡುವಂತಿಲ್ಲ. ಮಾಡಿದರೆ ನಿಮ್ಮ ತಲೆದಂಡವಾಗಬೇಕಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಸದ್ಯಕ್ಕಂತೂ ಅವರು ಜೈಲು ನಿಯಮವನ್ನೇ ಪಾಲಿಸಬೇಕಾಗುತ್ತದೆ. ಅಲ್ಲಿ ಕೊಡುವ ಆಹಾರವನ್ನೇ ಸೇವಿಸಬೇಕಾಗುತ್ತದೆ. ಇಂದು ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments