Webdunia - Bharat's app for daily news and videos

Install App

ಮೈಸೂರು ಫಾರ್ಮ್ ನಲ್ಲಿ ಆರಾಮವಾಗಿ ನಡೆದಾಡುತ್ತಿರುವ ದರ್ಶನ್, ಬೆನ್ನು ನೋವೆಲ್ಲಾ ಎಲ್ಲಿ ಹೋಯ್ತು

Krishnaveni K
ಶನಿವಾರ, 21 ಡಿಸೆಂಬರ್ 2024 (09:59 IST)
Photo Credit: X
ಮೈಸೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಜಾಮೀನಿನ ಮೇಲ ಬಿಡುಗಡೆಯಾಗಿ ಈಗ ಮೈಸೂರಿನ ಫಾರ್ಮ್ ಹೌಸ್ ನಲ್ಲಿದ್ದಾರೆ.

ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾಗ ತೀವ್ರ ಬೆನ್ನು ನೋವಿದೆ, ನಡೆದಾಡಲೂ ಕಷ್ಟವಾಗುತ್ತಿದೆ, ಶಸ್ತ್ರಚಿಕಿತ್ಸೆಯಾಗದೇ ಇದ್ದರೆ ಲಕ್ವ ಹೊಡೆಯುತ್ತದೆ ಎಂದು ನೆಪ ಹೇಳಿ ಮಧ್ಯಂತರ ಜಾಮೀನು ಪಡೆದಿದ್ದರು. ಬಳಿಕ ಒಂದು ತಿಂಗಳ ಕಾಲ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಆದರೆ ಇದುವರೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಆಸ್ಪತ್ರೆಯಿಂದ ಹೊರಬರುವಾಗಲೂ ಕುಂಟುತ್ತಲೇ ಮಗನ ಹೆಗಲ ಮೇಲೆ ಕೈ ಹಾಕಿ ಕಾರನ್ನೇರಿ ಮನೆಗೆ ತೆರಳಿದ್ದರು. ಇದೀಗ ಕೋರ್ಟ್ ನಿಂದ ತಾಯಿಯನ್ನು ನೋಡಲು ಅವಕಾಶ ಕೊಡಿ ಎಂದು ಮೈಸೂರಿಗೆ 15 ದಿನಗಳ ಭೇಟಿಗೆ ಅವಕಾಶ ಪಡೆದಿದ್ದಾರೆ.

ಅದರಂತೆ ತಮ್ಮ ಫಾರ್ಮ್ ಹೌಸ್ ಗೇ ತಾಯಿಯನ್ನು ಕರೆಸಿಕೊಂಡಿದ್ದಾರೆ. ಅವರ ಜೊತೆಗೆ ಪತ್ನಿ ವಿಜಯಲಕ್ಷ್ಮಿ, ಸ್ನೇಹಿತ ಧನ್ವೀರ್ ಗೌಡ, ತಾಯಿ ಮೀನಾ ತೂಗುದೀಪ ಸೇರಿದಂತೆ ಎಲ್ಲರೂ ಇದ್ದಾರೆ. ಆದರೆ ಫಾರ್ಮ್ ಹೌಸ್ ನಲ್ಲಿ ಆರಾಮವಾಗಿ ಓಡಾಡಿಕೊಂಡಿರುವ ದರ್ಶನ್ ವಿಡಿಯೋ, ಫೋಟೋಗಳನ್ನು ನೋಡಿ ನೆಟ್ಟಿಗರು ಈಗ ಬೆನ್ನು ನೋವು ಎಲ್ಲಿ ಹೋಯ್ತು ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಫಾರ್ಮ್ ಹೌಸ್ ನಲ್ಲೂ ತಮ್ಮ ಮೇಲೆ ಕ್ಯಾಮರಾ ಕಣ್ಣುಗಳಿವೆ ಎಂದು ಗೊತ್ತಾಗುತ್ತಿದ್ದಂತೇ ಗೇಟ್ ಗಳಿಗೆ ಕಪ್ಪು ಪಟ್ಟಿ ಹಾಕಿ ಹೊರಗಿನವರಿಗೆ ಏನೂ ಕಾಣದಂತೆ ನೋಡಿಕೊಂಡಿದ್ದಾರೆ ದರ್ಶನ್. 15 ದಿನ ಇಲ್ಲಿಯೇ ದರ್ಶನ್ ಇರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments