Webdunia - Bharat's app for daily news and videos

Install App

ಒಂದೇ ಒಂದು ಸಿಗರೇಟ್‌ಗಾಗಿ ಪೊಲೀಸ್‌ ಮುಂದೆ ಅಂಗಲಾಚುತ್ತಿರುವ ದರ್ಶನ್‌

sampriya
ಬುಧವಾರ, 12 ಜೂನ್ 2024 (19:26 IST)
Photo By X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 13 ಮಂದಿ ಆರೋಪಿಗಳನ್ನು ಕರೆದೊಯ್ದು ಒಂದೂವರೆ ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು ಮಾಡಲಾಗಿದೆ. ಇನ್ನೂ ವಿಚಾರಣೆ ಎದುರಿಸುತ್ತಿರುವ ದರ್ಶನ್‌ ಅವರು ಪೊಲೀಸರ ಮುಂದೆ ಸಿಗರೇಟ್‌ ನೀಡುವಂತೆ ಬೇಡಿಕೊಳ್ಳುತ್ತಿದ್ದಾರೆಂಬ ಮಾಹಿತಿ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಿನ್ನೆ ನಟ ದರ್ಶನ್‌ ಹಾಗೂ 13ಮಂದಿ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯನ್ನು ಚುರುಕು ಮಾಡಿದ್ದಾರೆ. ಅದಲ್ಲದೆ ನಟ ದರ್ಶನ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚಿತ್ರದುರ್ಗಾದಲ್ಲಿ ಇಂದು ಪ್ರತಿಭಟನೆ ನಡೆಸಲಾಗಿದೆ.

ಇನ್ನೂ ವಿಚಾರಣೆ ವೇಳೇ ಸಿಗರೇಟ್‌ ಇಲ್ಲದೆ ಕೈ ಕಾಲು ನಡುಗುತ್ತಿದ್ದು, ದಯಾಮಾಡಿ ಒಂದೇ ಒಂದು ಸಿಗರೇಟ್‌ ನೀಡುವಂತೆ ಪೊಲೀಸರಲ್ಲಿ ದರ್ಶನ್‌ ಅಂಗಲಾಚಿದ್ದಾರೆ. ಅದಲ್ಲದೆ ಪೊಲೀಸರು ಸಿಗರೇಟ್‌ ಕೊಡಿಸಲು ಸಾಧ್ಯವಿಲ್ಲವೆಂದು ಹೇಳಿ ದರ್ಶನ್‌ ಮೇಲೆ ಗರಂ ಆಗಿದ್ದಾರೆಂಬ ಮಾಹಿತಿಯಿದೆ.

ಇನ್ನೂ ಪೊಲೀಸ್‌ ಕಸ್ಟಡಿಯ ವಿಚಾರಣೆಯಲ್ಲಿರುವ ದರ್ಶನ್‌ಗೆ ರೇಣುಕಾಸ್ವಾಮಿ ಹತ್ಯೆ ಸಂಬಂಧ ಹಲವಾರು ಪ್ರಶ್ನೆಗಳನ್ನು ಮಾಡುತ್ತಿದ್ದರು ನಾನು ಏನು ತಪ್ಪು ಮಾಡಿಲ್ಲ ಎಂಬ ಉತ್ತರವನ್ನು ನೀಡುತ್ತಿದ್ದಾರಂತ್ತೆ. ನಾನು ಈ ಕೊಲೆ ಮಾಡಿಲ್ಲ, ಮಾಡಿಸಿಯೂ ಇಲ್ಲ ಎಂಬುದನ್ನಷ್ಟೇ ಪುನರ್‌ ಉಚ್ಚರಿಸುತ್ತಾರೆಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments