ಪತ್ನಿ, ಪುತ್ರನ ಭೇಟಿ ಬಳಿಕ ಮತ್ತಷ್ಟು ಮಂಕಾದ ನಟ ದರ್ಶನ್

Krishnaveni K
ಮಂಗಳವಾರ, 25 ಜೂನ್ 2024 (14:05 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿರುವ ನಟ ದರ್ಶನ್ ಗೆ ಜೈಲು ವಾಸ ಅಸಹನೀಯವಾಗಿದೆ. ಜೊತೆಗೆ ಪತ್ನಿ, ಪುತ್ರ ಭೇಟಿಯಾದ ಬಳಿಕ ಮತ್ತಷ್ಟು ಮಂಕಾಗಿದ್ದಾರೆ.
 

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ವಿರುದ್ಧ ಪ್ರಬಲ ಸಾಕ್ಷ್ಯಗಳಿವೆ. ಹೀಗಾಗಿ ದರ್ಶನ್ ಆಂಡ್ ಗ್ಯಾಂಗ್ ಲಾಕ್ ಆಗುವುದು ಬಹುತೇಕ ಖಚಿತವಾಗಿದೆ. ಇದೀಗ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ದರ್ಶನ್ ಮೊಬೈಲ್ ಪಡೆದು ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.

ಕಳೆದ ಮೂರು ರಾತ್ರಿಗಳನ್ನು ಜೈಲಿನಲ್ಲಿ ಕಳೆದಿರುವ ದರ್ಶನ್ ಗೆ ಪ್ರಕರಣದಲ್ಲಿ ಸಾಕ್ಷ್ಯಗಳು ಬಲವಾಗಿರುವುದು ಹೈರಾಣಾಗಿಸಿದೆ. ಇದರಿಂದಾಗಿ ನಿದ್ರೆ ಬರುತ್ತಿಲ್ಲ, ಊಟ ಸೇರುತ್ತಿಲ್ಲ. ಅದರಲ್ಲೂ ಜೈಲೂಟ ಸೇರದೇ ಯಾರೊಂದಿಗೂ ಏನೂ ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ.

ಈ ನಡುವೆ ನಿನ್ನೆ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಜೈಲಿಗೆ ಹೋಗಿದ್ದರು. ಈ ವೇಳೆ ಮಗನನ್ನು ನೋಡಿ ಅವರ ದುಃಖದ ಕಟ್ಟೆ ಒಡೆದಿತ್ತು ಎನ್ನಲಾಗಿದೆ. ಇಬ್ಬರೂ 15 ನಿಮಿಷಗಳ ಕಾಲ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ದರ್ಶನ್ ಮತ್ತಷ್ಟು ಮಂಕಾಗಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments