Webdunia - Bharat's app for daily news and videos

Install App

ಪ್ರಾಕ್ಟಿಕಲ್ ಆಗಿ ಪರಭಾಷಿಕರಿಗೆ ಗುದ್ದುಕೊಡಲು ಮುಂದಾದ ನಟ ದರ್ಶನ್

Webdunia
ಶುಕ್ರವಾರ, 1 ಡಿಸೆಂಬರ್ 2023 (10:40 IST)
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡ ಸಿನಿಮಾಗಳಿಗೆ ಮೊದಲ ಆದ್ಯತೆಯಿರಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳುತ್ತಲೇ ಬರುತ್ತಿದ್ದಾರೆ.

ಇತ್ತೀಚೆಗೆ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹೋರಾಟದಲ್ಲಿ ಭಾಗಿಯಾಗಿದ್ದಾಗ ಹೋರಾಟಕ್ಕೆ ಮಾತ್ರ ನಾವು ನೆನಪಾಗ್ತೀವಿ. ಸಿನಿಮಾ ಎಂದರೆ ಕನ್ನಡ ಸಿನಿಮಾವನ್ನೂ ಕಡೆಗಣಿಸಿ ತಮಿಳು, ತೆಲುಗು ಎಂದು ಪರಭಾಷೆ ಸಿನಿಮಾಗಳಿಗೆ ಕೋಟಿ ಕೋಟಿ ದುಡ್ಡು ಮಾಡಲು ಅವಕಾಶ ಕೊಡ್ತೀರಿ ಎಂದು ಆಕ್ಷೇಪಿಸಿದ್ದರು.

ಇತ್ತೀಚೆಗೆ ನಡೆದ ಕೈವ ಸಿನಿಮಾ ಟ್ರೈಲರ್ ಲಾಂಚ್ ವೇಳೆಯೂ ದರ್ಶನ್ ಮತ್ತೆ ಇದೇ ಮಾತನ್ನು ಪುನರುಚ್ಚರಿಸಿದ್ದರು. ಬೇರೆ ಭಾಷೆಯ ಸಿನಿಮಾಗಳನ್ನೂ ನೋಡಿ. ಆದರೆ ಮೊದಲು ನಮ್ಮ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಮಿಕ್ಕಿದ್ದೆಲ್ಲಾ ಆ ಮೇಲೆ. ಕನ್ನಡ ಸಿನಿಮಾಗಳನ್ನು ನೋಡಿ ಎಂದಿದ್ದರು.

ಇದೀಗ ಅದನ್ನೇ ಪ್ರಾಕ್ಟಿಕಲ್ ಆಗಿ ಮಾಡಲು ಹೊರಟಿದ್ದಾರೆ ದರ್ಶನ್. ತೆಲುಗು, ಹಿಂದಿ ಭಾಷೆಗಳ ಬಿಗ್ ಸಿನಿಮಾಗಳ ಮುಂದೆ ತಮ್ಮ ಕಾಟೇರ ಸಿನಿಮಾ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ಕನ್ನಡ ಸಿನಿಮಾಗಳನ್ನು ಕನ್ನಡ ಪ್ರೇಕ್ಷಕರು ಎಷ್ಟು ನೋಡುತ್ತಾರೆ, ಪ್ರೋತ್ಸಾಹ ಕೊಡುತ್ತಾರೆ ನೋಡೋಣ ಎಂದು ಸ್ಪರ್ಧೆಗಿಳಿದಿದ್ದಾರೆ. ದರ್ಶನ್ ಗೆ ಕನ್ನಡದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೀಗಾಗಿ ಪರಭಾಷೆ ಹಾವಳಿ ಮಧ್ಯೆ ಅವರ ಸಿನಿಮಾವನ್ನು ಕನ್ನಡ ಪ್ರೇಕ್ಷಕ ವೀಕ್ಷಿಸಿ ಸಿನಿಮಾ ಗೆದ್ದರೆ ದರ್ಶನ್ ಗೆ ಜಯ ಸಿಕ್ಕಂತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments