Webdunia - Bharat's app for daily news and videos

Install App

ಜಾಮೀನು ನಿರಾಕರಣೆ ಬೆನ್ನಲ್ಲೇ ಹೇಗಿದೆ ದರ್ಶನ್ ಆರೋಗ್ಯ, ವೈದ್ಯರು ಹೇಳಿದ್ದೇನು

Krishnaveni K
ಮಂಗಳವಾರ, 15 ಅಕ್ಟೋಬರ್ 2024 (10:03 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಜಾಮೀನು ನಿರಾಕರಣೆಯಾದ ಬೆನ್ನಲ್ಲೇ ಅವರ ಆರೋಗ್ಯ ಸ್ಥಿತಿ ಬಗ್ಗೆ ಲೇಟೆಸ್ಟ್ ಮಾಹಿತಿ ಹೊರಬಿದ್ದಿದೆ. ಅವರನ್ನು ವಿಮ್ಸ್ ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿದ್ದಾರೆ.

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಗೆ ಬೆನ್ನು ನೋವು ತೀವ್ರವಾಗಿ ಕಾಡುತ್ತಿದೆ. ಕೂತರೆ ನಿಲ್ಲಲು ಆಗುತ್ತಿಲ್ಲ, ನಿಂತರೆ ಕೂರಲು ಕಷ್ಟ ಎನ್ನುವ ಪರಿಸ್ಥಿತಿಯಾಗಿದೆ. ಸ್ಕ್ಯಾನಿಂಗ್ ಮಾಡಿಸಿ ಶಸ್ತ್ರಚಿಕಿತ್ಸೆಗೊಳಗಾಗಲು ವೈದ್ಯರು ಸೂಚಿಸಿದ್ದರೂ ದರ್ಶನ್ ಬೆಂಗಳೂರಿನಲ್ಲಿಯೇ ಮಾಡಿಸುವುದಾಗಿ ಹಠ ಹಿಡಿದು ಕುಳಿತಿದ್ದಾರೆ.

ತಮ್ಮ ಆರೋಗ್ಯ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ಜಾಮೀನು ಪಡೆಯಲು ಮುಂದಾಗಿದ್ದ ದರ್ಶನ್ ಗೆ ಕೋರ್ಟ್ ನಿನ್ನೆ ಜಾಮೀನು ನಿರಾಕರಿಸುವ ಮೂಲಕ ಶಾಕ್ ಕೊಟ್ಟಿತ್ತು. ಹೀಗಾಗಿ ದರ್ಶನ್ ಇದೇ ವಿಚಾರವನ್ನಿಟ್ಟುಕೊಂಡು ಬೆಂಗಳೂರಿನ ಜೈಲಿಗೆ ಶಿಫ್ಟ್ ಮಾಡಿಸಲು ಮನವಿ ಮಾಡಬಹುದು.

ಇದರ ನಡುವೆ ಅವರ ಬೆನ್ನು ನೋವು ತೀವ್ರವಾಗಿದ್ದು ಜೈಲಿಗೆ ಬಂದಿರುವ ವಿಮ್ಸ್ ಆಸ್ಪತ್ರೆಯ ನ್ಯೂರೋಲಜಿ ತಜ್ಞರು ದರ್ಶನ್ ಆರೋಗ್ಯ ತಪಾಸಣೆ ನಡೆಸಿ ವರದಿ ನೀಡಿದ್ದಾರೆ. ಇದು ನರಗಳ ಸಮಸ್ಯೆಯಿಂದಾಗುತ್ತಿರುವ ನೋವು ಎಂದಿದ್ದಾರೆ. ಸ್ವಲ್ಪ ಊತ ಕಂಡುಬಂದಿದೆ. ಇದಕ್ಕೆ ಸ್ಕ್ಯಾನಿಂಗ್ ಮಾಡಿಸಲು ಸಲಹೆ ನೀಡಿದ್ದಾರೆ. ಇದಲ್ಲದೆ, ಸದ್ಯದ ಮಟ್ಟಿಗೆ ಕೆಲವು ಮಾತ್ರೆ ಮತ್ತು ಮುಲಾಮು ಹಚ್ಚಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments