Webdunia - Bharat's app for daily news and videos

Install App

ಮತ್ತೆ ಡಿಬಾಸ್ ಹವಾ ಶುರು: ದರ್ಶನ್ ನೋಡಲು ಮನೆ ಮುಂದೆ ಜನರ ಕ್ಯೂ ವಿಡಿಯೋ

Krishnaveni K
ಭಾನುವಾರ, 2 ಫೆಬ್ರವರಿ 2025 (16:46 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬಳಿಕ ಮತ್ತೆ ಡಿಬಾಸ್ ಹವಾ ಶುರುವಾಗಿದೆ. ಇಂದು ಮನೆ ಮುಂದೆ ಬಂದಿದ್ದ ಅಭಿಮಾನಿಗಳನ್ನು ದರ್ಶನ್ ಭೇಟಿಯಾಗಿದ್ದಾರೆ.

ದರ್ಶನ್ ಮನೆ ಮುಂದೆ ಭಾನುವಾರಗಳಂದು ಜನರು ಕ್ಯೂ ನಿಂತು ಅವರನ್ನು ಭೇಟಿಯಾಗುವ ಪರಿಪಾಠವಿತ್ತು. ರಾಜ ರಾಜೇಶ್ವರಿ ನಗರದ ಮನೆ ಮುಂದೆ ಹೀಗಾಗಿ ನಿತ್ಯವೂ ಜನರಿಂದ ತುಂಬಿ ತುಳುಕುತ್ತಿತ್ತು. ಆದರೆ ದರ್ಶನ್ ಕೊಲೆ ಕೇಸ್ ನಲ್ಲಿ ಸಿಲುಕಿಕೊಂಡ ಮೇಲೆ ಇದು ಕಡಿಮೆಯಾಗಿತ್ತು.

ಜೈಲಿನಿಂದ ಹೊರಬಂದ ಮೇಲೆ ತಾವಾಯಿತು ತಮ್ಮ ಕುಟುಂಬವಾಯಿತು ಎನ್ನುವಂತಿದ್ದ ದರ್ಶನ್ ಇದೀಗ ಮತ್ತೆ ಅಭಿಮಾನಿಗಳನ್ನು ಎಂದಿನಂತೆ ಮನೆ ಮುಂದೆ ಭೇಟಿಮಾಡಿದ್ದಾರೆ. ಇಂದು ದರ್ಶನ್ ನೋಡಲು ಜನ ಕ್ಯೂನಲ್ಲಿ ನಿಂತಿದ್ದು ಕಂಡುಬಂದಿದೆ. ಎಲ್ಲರಿಗೂ ಕೈ ಕುಲುಕಿ ದರ್ಶನ್ ಹಾರೈಸಿ ಕಳುಹಿಸಿದ್ದಾರೆ.

ಇನ್ನು, ಸಿನಿಮಾ ವಿಚಾರಕ್ಕೆ ಬಂದರೆ ದರ್ಶನ್ ಇದೀಗ ಚಿತ್ರೀಕರಣ ಹಂತದಲ್ಲಿರುವ ಡೆವಿಲ್ ಬಗ್ಗೆ ಮಾತ್ರ ಗಮನಕೇಂದ್ರೀಕರಿಸಲಿದ್ದಾರೆ ಎನ್ನಲಾಗಿದೆ. ಅದಾದ ಬಳಿಕ ಜೋಗಿ ಪ್ರೇಮ್ ಜೊತೆ ಸಿನಿಮಾ ಮಾಡಲಿದ್ದಾರೆ. ಆದರೆ ಉಳಿದ ಸಿನಿಮಾಗಳ ಅಡ್ವಾನ್ಸ್ ಹಣವನ್ನು ಮರಳಿಸುತ್ತಿದ್ದಾರೆ ಎಂಬ ಸುದ್ದಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments