ದರ್ಶನ್ ಬೆನ್ನು ಮಂಗ ಮಾಯ, ಆಸ್ಪತ್ರೆಯಿಂದ ಡಿಸ್ಚಾರ್ಜ್

Krishnaveni K
ಸೋಮವಾರ, 16 ಡಿಸೆಂಬರ್ 2024 (14:37 IST)
ಬೆಂಗಳೂರು: ರೆಗ್ಯುಲರ್ ಜಾಮೀನು ಸಿಕ್ಕುತ್ತಿದ್ದಂತೇ ಬೆನ್ನು ನೋವು ಮಂಗಮಾಯವಾಗಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಲ್ಲಿದ್ದ ದರ್ಶನ್ ಗೆ ಬೆನ್ನು ನೋವಿನ ಶಸ್ತ್ರಚಿಕಿತ್ಸೆ ನೆಪದಲ್ಲಿ ಮಧ್ಯಂತರ ಜಾಮೀನು ಸಿಕ್ಕಿತ್ತು. ಇದಾದ ಬಳಿಕ ಅವರು ಬಿಜಿಎಸ್ ಅಸ್ಪತ್ರೆಗೆ ದಾಖಲಾಗಿದ್ದರು. ಆದರೆ ಒಂದು ತಿಂಗಳವರೆಗೂ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ.

ಇತ್ತೀಚೆಗೆ ರೆಗ್ಯುಲರ್ ಜಾಮೀನು ತೀರ್ಪಿನ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆದಿದೆ ಎಂಬ ಸುದ್ದಿಗಳಿತ್ತು. ಆದರೆ ಈಗ ರೆಗ್ಯುಲರ್ ಜಾಮೀನು ಸಿಕ್ಕ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಹೀಗಾಗಿ ಶಸ್ತ್ರಚಿಕಿತ್ಸೆ ಎಲ್ಲವೂ ನೆಪವಾಗಿತ್ತೇ ಎಂಬ ಪ್ರಶ್ನೆ ಮೂಡಿದೆ.

ಬಳ್ಳಾರಿ ಜೈಲಿನಲ್ಲಿದ್ದಾಗ ನಡೆದಾಡಲೂ ಕಷ್ಟಪಡುತ್ತಿದ್ದರು. ಆಗ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ಇದ್ದರೆ ಲಕ್ವ ಹೊಡೆಯಬಹುದು ಎಂದು ಅವರ ಪರ ವಕೀಲರು ಹೇಳಿದ್ದರು. ಕಳೆದ ವಾರವೂ ವಕೀಲರು ಬಿಪಿ ಹೆಚ್ಚು ಕಡಿಮೆಯಾಗುತ್ತಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿಲ್ಲ ಎಂಬ ವೈದ್ಯಕೀಯ ವರದಿ ಸಲ್ಲಿಸಿದ್ದರು. ಈಗ ನೋಡಿದರೆ ಅವರು ಸಂಪೂರ್ಣವಾಗಿ ಗುಣಮುಖರಾದಂತೆ ಕಂಡುಬರುತ್ತಿದೆ. ಹೀಗಾಗಿ ಬೆನ್ನುನೋವೆಲ್ಲಾ ನಾಟಕವೇ ಎಂಬ ಪ್ರಶ್ನೆ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments