ಬೆನ್ನು ನೋವಿದ್ದರೂ ವೈದ್ಯರ ಮುಂದೆ ಪಟ್ಟು ಬಿಡುತ್ತಿಲ್ಲ ದರ್ಶನ್

Krishnaveni K
ಮಂಗಳವಾರ, 5 ನವೆಂಬರ್ 2024 (20:05 IST)
ಬೆಂಗಳೂರು: ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಎಷ್ಟೇ ನೋವಿದ್ದರೂ ವೈದ್ಯರ ಮುಂದೆ ಈ ಒಂದು ವಿಚಾರಕ್ಕೆ ಬಿಲ್ ಕುಲ್ ರಾಜಿಯಾಗಲು ಒಪ್ಪುತ್ತಿಲ್ಲ ಎಂದು ತಿಳಿದುಬಂದಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ದರ್ಶನ್ ಇತ್ತೀಚೆಗಷ್ಟೇ ಮಧ್ಯಂತರ ಜಾಮೀನು ಪಡೆದು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಬೆನ್ನುನೋವಿಗೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿಯೇ ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದೀಗ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ನಾಲ್ಕು ದಿನ ಕಳೆದಿದೆ.

ನಟ ದರ್ಶನ್ ಗೆ ಬೆನ್ನು ನೋವಿನ ತೀವ್ರತೆಯಿಂದಾಗಿ ಕಾಲೂ ನೋವು ಉಂಟಾಗಿದ್ದು ಇದರಿಂದ ನಡೆದಾಡಲೂ ಕಷ್ಟಪಡುತ್ತಿದ್ದಾರೆ.  ಮೊನ್ನೆಯಷ್ಟೇ ನಟ ಧನ್ವೀರ್ ಸಹಾಯದೊಂದಿಗೆ ನಡೆದಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆಗೊಳಗಾಗಲು ಸೂಚಿಸಿದ್ದರು.

ಹಾಗಿದ್ದರೂ ಶಸ್ತ್ರಚಿಕಿತ್ಸೆಗೊಳಗಾಗಲು ದರ್ಶನ್ ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ. ಏನೇ ಇದ್ದರೂ ಫಿಸಿಯೋಥೆರಪಿ ಮತ್ತು ಗುಳಿಗೆಗಳ ಮೂಲಕವೇ ಗುಣಪಡಿಸಿ. ಯಾವುದೇ ಕಾರಣಕ್ಕೂ ಶಸ್ತ್ರಚಿಕಿತ್ಸೆ ಬೇಡ ಎಂದು ವೈದ್ಯರ ಮುಂದೆ ಪಟ್ಟು ಹಿಡಿದಿದ್ದಾರಂತೆ. ಸದ್ಯದಲ್ಲೇ ಅವರು ವೈದ್ಯಕೀಯ ವರದಿಗಳನ್ನು ಕೋರ್ಟ್ ಗೆ ಸಲ್ಲಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments