Webdunia - Bharat's app for daily news and videos

Install App

ಮೊನ್ನೆಯವರೆಗೂ ಸುಮಲತಾ ಪರವಾಗಿಯೇ ಇದ್ದೆ: ಚುನಾವಣಾ ಪ್ರಚಾರದ ಬಗ್ಗೆ ನಟ ದರ್ಶನ್ ಹೇಳಿಕೆ

Krishnaveni K
ಭಾನುವಾರ, 10 ಮಾರ್ಚ್ 2024 (12:21 IST)
ಬೆಂಗಳೂರು: ಈ ಬಾರಿಯೂ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಕಣಕ್ಕಿಳಿಯಲು ಸಜ್ಜಾಗಿರುವ ಸುಮಲತಾ ಅಂಬರೀಶ್ ಗೆ ನಟ ದರ್ಶನ್ ಸಾಥ್ ನೀಡಲಿದ್ದಾರೆ. ಈ ಬಾರಿಯೂ ಸುಮಲತಾ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸುಮಲತಾ ಅಂಬರೀಶ್ ತಯಾರಿ ನಡೆಸುತ್ತಿದ್ದಾರೆ. ಆದರೆ ಮಂಡ್ಯ ಟಿಕೆಟ್ ಗೆ ಮೈತ್ರಿ ಪಕ್ಷ ಜೆಡಿಎಸ್ ಕೂಡಾ ಬೇಡಿಕೆಯಿಟ್ಟಿದೆ. ಹೀಗಾಗಿ ಇನ್ನೂ ಬಿಜೆಪಿ ನಾಯಕರು ಮಂಡ್ಯ ಟಿಕೆಟ್ ಸುಮಲತಾಗೆ ಕೊಡುವ ಬಗ್ಗೆ ತೀರ್ಮಾನಕ್ಕೆ ಬಂದಿಲ್ಲ.

ಆದರೆ ಸುಮಲತಾ ಮಾತ್ರ ಇನ್ನೊಂದು ವಾರ ಕಾಯಿರಿ. ನಿಮಗೇ ಗೊತ್ತಾಗುತ್ತದೆ. ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯಾಗಿಯೇ ಕಣಕ್ಕಿಳಿಯಲಿದ್ದೇನೆ ಎಂದು ವಿಶ್ವಾಸದಿಂದಲೇ ಹೆಳುತ್ತಿದ್ದಾರೆ. ಈ ನಡುವೆ ಕಳೆದ ಬಾರಿಯಂತೆ ಈ ಬಾರಿಯೂ ದರ್ಶನ್-ಯಶ್ ಪ್ರಚಾರಕ್ಕೆ ಬರುವ ಬಗ್ಗೆಯೂ ಮಾತನಾಡಿದ್ದರು. ಆದರೆ ಯಶ್ ಟಾಕ್ಸಿಕ್ ಸಿನಿಮಾದಲ್ಲಿ ಬ್ಯುಸಿ ಇರುವ ಕಾರಣ ರಾಜಕೀಯದಿಂದ ದೂರವುಳಿಯುವುದಾಗಿ ಹೇಳಿದ್ದರು.

ಆದರೆ ದರ್ಶನ್ ಮಾತ್ರ ಸುಮಮ್ಮನ ಪರವಾಗಿ ಪ್ರಚಾರ ಮಾಡುವುದಾಗಿ ಖಚಿತಪಡಿಸಿದ್ದಾರೆ. ‘ಮೊನ್ನೆಯವರೆಗೂ ಸುಮಲತಾ ಪರವಾಗಿ ಇದ್ದೆ. ಈಗ ಅಮ್ಮನ ಕೈಬಿಡಕ್ಕಾಗುತ್ತಾ?’ ಎಂದು ಪ್ರಶ್ನಿಸಿದ್ದಾರೆ.  ಆ ಮೂಲಕ ಈ ಬಾರಿಯೂ ಸುಮಲತಾ ಪರವಾಗಿ ಪ್ರಚಾರಕ್ಕಿಳಿಯುವುದು ಖಚಿತ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments