Webdunia - Bharat's app for daily news and videos

Install App

ಸತ್ತವನ ಬಗ್ಗೆ ಒಳ್ಳೆ ಮಾತಾಡೋಣ: ಡ್ರಗ್ ಮಾಫಿಯಾ ಬಗ್ಗೆ ಡಿ ಬಾಸ್ ದರ್ಶನ್ ಹೇಳಿಕೆ

Webdunia
ಸೋಮವಾರ, 31 ಆಗಸ್ಟ್ 2020 (12:37 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ವಿಚಾರವಾಗಿ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿಕೆ ನೀಡಿದ್ದಾರೆ.


ನಾನು 20 ವರ್ಷದಿಂದಲೂ ಇಂಡಸ್ಟ್ರಿಯಲ್ಲಿದ್ದೀನಿ. ಇದುವರೆಗೆ ಅಂತಹದ್ದನ್ನು ಕಣ್ಣಾರೆ ನೋಡಿಲ್ಲ. ಇದೆಯೋ ಇಲ್ಲವೋ ಎಂಬುದನ್ನು ಪೊಲೀಸ್ ತನಿಖೆಯಾಗಿ ಗೊತ್ತಾಗಲಿ. ಒಂದು ಕ್ಲಾಸ್ ಎಂದ ಮೇಲೆ ಅಲ್ಲಿ ರ್ಯಾಂಕ್ ಸ್ಟೂಡೆಂಟ್ಸ್ ಇರ್ತಾರೆ, ದಡ್ಡರೂ ಇರ್ತಾರೆ. ಎಲ್ಲರೂ ಒಂದೇ ರೀತಿ ಇರಲ್ಲ ಅಲ್ವಾ? ಏನಿದ್ರೂ ಅದು ಪೊಲೀಸ್ ತನಿಖೆಯಿಂದ ಗೊತ್ತಾಗಲಿ. ಅದಕ್ಕಿಂತ ಮೊದಲು ನಾವೇ ಏನೋ ತೀರ್ಪು ಕೊಡುವುದು ಬೇಡ ಎಂದು ದರ್ಶನ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಇಂದ್ರಜಿತ್ ಲಂಕೇಶ್ ಚಿರು ಸರ್ಜಾ ಹೆಸರನ್ನು ಪರೋಕ್ಷವಾಗಿ ಬಳಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ದರ್ಶನ್ ‘ಯಾರಾದರೂ ಬದುಕಿದ್ದರೆ ಅವರನ್ನು ಅವರು ಸಮರ್ಥನೆ ಮಾಡಿಕೊಳ್ಳಬಹುದಿತ್ತು. ಸತ್ತವನ ಬಗ್ಗೆ ಏನು ಮಾತಾಡೋಣ ಹೇಳಿ? ಸತ್ತವರ ಬಗ್ಗೆ ಒಂದೊಳ್ಳೆ ಮಾತನಾಡಬೇಕಷ್ಟೇ ಹೊರತು, ಇಲ್ಲದ್ದನ್ನು ಹೇಳಬಾರದು. ಇಂದ್ರಜಿತ್ ಲಂಕೇಶ್ ಹೇಳಿಕೆ ಬಗ್ಗೆ ನಾನೇನು ಹೇಳಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments