Webdunia - Bharat's app for daily news and videos

Install App

ದರ್ಶನ್, ಪವಿತ್ರಾ ಗೌಡ ಪಾಲಿಗೆ ಇಂದು ಗುಡ್ ನ್ಯೂಸ್ ಸಿಗಬಹುದಾ

Krishnaveni K
ಸೋಮವಾರ, 30 ಸೆಪ್ಟಂಬರ್ 2024 (08:46 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎ2 ಆರೋಪಿ ದರ್ಶನ್ ಮತ್ತು ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟವಾಗುವ ನಿರೀಕ್ಷೆಯಿದೆ.ಈ ಸೋಮವಾರ ಅವರಿಗೆ ಬಿಡುಗಡೆ ಸಿಗಬಹುದು ಎಂದು ಅಭಿಮಾನಿಗಳು ನಿರೀಕ್ಷೆಯಲ್ಲಿದ್ದಾರೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ 17 ಆರೋಪಿಗಳು ಅರೆಸ್ಟ್ ಆಗಿದ್ದರು. ಈ ಪೈಕಿ ಮೂವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಆರೋಪಿಗಳು ಈಗಾಗಲೇ 100 ಕ್ಕೂ ಹೆಚ್ಚು ದಿನ ಜೈಲು  ವಾಸ ಅನುಭವಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ದರ್ಶನ್, ಪವಿತ್ರಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಶುಕ್ರವಾರ ಇಬ್ಬರ ಬೇಲ್ ಅರ್ಜಿಯೂ ವಿಚಾರಣೆಗೆ ಬಂದಿತ್ತು. ಈ ವೇಳೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು. ಹೀಗಾಗಿ ದರ್ಶನ್ ಮತ್ತು ಪವಿತ್ರಾ ಮತ್ತೆ ಎರಡು ದಿನ ಕಾದು ಕೂರಬೇಕಾಯಿತು. ಇಂದು ದರ್ಶನ್ ಬಿಡುಗಡೆಯಾದರೆ ಅವರನ್ನು ಕರೆತರಲು ಆಪ್ತರು ಹೆಲಿಕಾಪ್ಟರ್ ಬುಕ್ ಮಾಡಿ ಕಾಯುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ.

ಸದ್ಯಕ್ಕೆ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರೆ, ಅತ್ತ ಪವಿತ್ರಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರೂ ಪ್ರಭಾವೀ ವ್ಯಕ್ತಿಗಳಾಗಿರುವುದರಿಂದ ಜಾಮೀನು ಸಿಗುವುದು ಕಷ್ಟವೆಂದೇ ಹೇಳಲಾಗುತ್ತಿದೆ. ಹಾಗಿದ್ದರೂ ಇಂದು ಗುಡ್ ನ್ಯೂಸ್ ಸಿಗಬಹುದು ಎಂದು ದರ್ಶನ್, ಪವಿತ್ರಾ ಕಾಯುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments