Webdunia - Bharat's app for daily news and videos

Install App

ಬಳ್ಳಾರಿ ಜೈಲಿನಲ್ಲಿ ಬೆಡ್ ಶೀಟ್ ಗೂ ಅಂಗಲಾಚಬೇಕಾದ ಸ್ಥಿತಿಯಲ್ಲಿ ದರ್ಶನ್

Krishnaveni K
ಶನಿವಾರ, 31 ಆಗಸ್ಟ್ 2024 (11:16 IST)
ಬಳ್ಳಾರಿ: ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಗೆ ಈಗ ಬೆಡ್ ಶೀಟ್ ಗೂ ಅಂಗಲಾಚಬೇಕಾದ ಪರಿಸ್ಥಿತಿಯಾಗಿದೆ. ರಾತ್ರಿಯಿಡೀ ನಿದ್ರೆಯಿಲ್ಲದೇ ಕಳೆದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನಲೆಯಲ್ಲಿ ದರ್ಶನ್ ರನ್ನು ಮೊನ್ನೆ ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು. ಹೊಸ ಜೈಲಿಗೆ ಸ್ಥಳಾಂತರವಾದ ಬಳಿಕ ದರ್ಶನ್ ಇಲ್ಲಿ ಹೊಂದಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಇದುವರೆಗೆ ದರ್ಶನ್ ಗೆ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಸಾಧ್ಯವಾಗಲಿಲ್ಲ.

ಮೊದಲ ದಿನ ಸರಿಯಾಗಿ ಊಟ-ತಿಂಡಿ ಮಾಡದೇ ರಾತ್ರಿಯಿಡೀ ನಿದ್ರೆಯಿಲ್ಲದೇ ಕಳೆದಿದ್ದರು. ನಿನ್ನೆಯೂ ಅದೇ ಕತೆಯಾಗಿದೆ. ವಿಪರೀತ ಸೊಳ್ಳೆ ಕಾಟದಿಂದಾಗಿ ತಡರಾತ್ರಿಯವರೆಗೂ ನಿದ್ರೆಯಿಲ್ಲದೇ ಕಳೆದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಂತೆ ಇಲ್ಲಿ ಯಾವುದೇ ವಿಶೇಷ ಸವಲತ್ತುಗಳಿಲ್ಲ.

ಯಾವುದೇ ವಿಶೇಷ ಸವಲತ್ತುಗಳನ್ನು ನೀಡದಂತೆ ಜೈಲಿನ ಸಿಬ್ಬಂದಿಗಳಿಗೆ ಸ್ಪಷ್ಟ ಸಂದೇಶ ಕೊಡಲಾಗಿದೆ. ಹೀಗಾಗಿ ದರ್ಶನ್ ಗೆ ಇಲ್ಲಿ ದಿನ ಕಳೆಯುವುದು ಕಷ್ಟವಾಗುತ್ತಿದೆ. ಸೊಳ್ಳೆ ಕಾಟ ತಡೆಯಲಾಗದೇ ಮನೆಯಿಂದ ತಂದ ಬೆಡ್ ಶೀಟ್ ಆದರೂ ಕೊಡಿ ಎಂದು ಮನವಿ ಮಾಡಿದ್ದಾರೆ. ತಮ್ಮ ಜೊತೆಗೆ ತಂದಿದ್ದ ಲಲಿತಾ ಸಹಸ್ರನಾಮ, ಆಧ್ಯಾತ್ಮದ ಪುಸ್ತಕಗಳನ್ನು ಓದುತ್ತಾ ದಿನ ಕಳೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಮುಂದಿನ ಸುದ್ದಿ
Show comments