Select Your Language

Notifications

webdunia
webdunia
webdunia
webdunia

ಅಭಿಮಾನಿಗಳಿಗೆ ದಾಸ ದರ್ಶನ್ ರಿಂದ ವಿಶೇಷ ಮನವಿ

ಅಭಿಮಾನಿಗಳಿಗೆ ದಾಸ ದರ್ಶನ್ ರಿಂದ ವಿಶೇಷ ಮನವಿ
ಬೆಂಗಳೂರು , ಮಂಗಳವಾರ, 26 ಜನವರಿ 2021 (09:46 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿವೆ. ಇದರ ಬೆನ್ನಲ್ಲೇ ದಾಸ ದರ್ಶನ್ ತಮ್ಮ ಪ್ರೀತಿಯ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ.


ಕೊರೋನಾ ವೈರಸ್ ಇರುವುದರಿಂದ ಈ ಬಾರಿ ಹುಟ್ಟುಹಬ್ಬದ ಸಂಭ‍್ರಮಾಚರಣೆ ಬೇಡ ಎಂದು ನಿರ್ಧರಿಸಿದ್ದೇನೆ. ನಾನು ಊರಿನಲ್ಲಿ ಇರುವುದಿಲ್ಲ. ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆ  ಶುಭ ಕೋರಲು ಬರುತ್ತಿದ್ದ ನಲ್ಮೆಯ ಅಭಿಮಾನಿಗಳಿಗೆ  ಈ ಸೂಚನೆ; ಯಾರೂ ಮನೆಯ ಹತ್ತಿರ ಬಂದು ನಿರಾಶರಾಗಬೇಡಿ. ನನ್ನ ಈ ಕೋರಿಕೆಯನ್ನು ಮನ್ನಿಸಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಹೇಳಿದ್ದಾರೆ. ಪ್ರತೀ ವರ್ಷವೂ ದರ್ಶನ್ ತಮ್ಮ ಹುಟ್ಟುಹಬ್ಬದಂದು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸದೇ ಇರಲು ತೀರ್ಮಾನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗುವಿನ ಜೀವ ಉಳಿಸಿ ನಿಜವಾದ ನಾಯಕ ಎನಿಸಿಕೊಂಡ ನಟ ಸೋನು ಸೂದ್