Select Your Language

Notifications

webdunia
webdunia
webdunia
webdunia

ಕಾಟೇರ ಈವೆಂಟ್ ಗೆ ಬನ್ನಿ: ಕೈ ಮುಗಿದು ಕೇಳಿಕೊಂಡ ನಟ ದರ್ಶನ್

ಕಾಟೇರ ಈವೆಂಟ್ ಗೆ ಬನ್ನಿ: ಕೈ ಮುಗಿದು ಕೇಳಿಕೊಂಡ ನಟ ದರ್ಶನ್
ಬೆಂಗಳೂರು , ಶನಿವಾರ, 16 ಡಿಸೆಂಬರ್ 2023 (10:30 IST)
ಬೆಂಗಳೂರು: ಬಹುನಿರೀಕ್ಷಿತ ಕಾಟೇರ ಸಿನಿಮಾದ ಟ್ರೈಲರ್ ಲಾಂಚ್ ಮತ್ತು ಪ್ರಿ ರಿಲೀಸ್ ಈವೆಂಟ್ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.

ಇಂದು ಸಂಜೆ ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಟ್ರೈಲರ್ ಲಾಂಚ್ ಜೊತೆಗೆ ಪ್ರಿ ರಿಲೀಸ್ ಈವೆಂಟ್ ಆಯೋಜನೆ ಮಾಡಲು ಚಿತ್ರತಂಡ ಈಗಾಗಲೇ ಸಿದ್ಧತೆ ನಡೆಸಿದೆ.

ಇದೀಗ ಖುದ್ದಾಗಿ ನಟ ದರ್ಶನ್ ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ. ಎಲ್ಲಾ ಅಭಿಮಾನಿಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬಂದು ನಮ್ಮನ್ನು ಹರಸಿ, ಕನ್ನಡ ಚಿತ್ರವನ್ನು ಪ್ರೋತ್ಸಾಹಿಸಿ ಎಂದು ದರ್ಶನ್ ಕೈ ಮುಗಿದು ಕೇಳಿಕೊಂಡಿದ್ದಾರೆ.

ಕಾಟೇರ ಸಿನಿಮಾ ಡಿಸೆಂಬರ್ 29 ರಂದು ರಾಜ್ಯಾದ್ಯಂತ ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ. ಇದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಅಪ್ಪಟ ಕನ್ನಡ ಮಣ್ಣಿನ ಕತೆ ಹೊಂದಿದೆ ಎಂದು ಈಗಾಗಲೇ ಚಿತ್ರತಂಡ ಹೇಳಿದೆ. ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಶ್ವರ್ಯಾ ಮಗಳ ಹಣೆ ತೋರಿಸಿದ್ದಕ್ಕೆ ಧೀರೂಭಾಯಿ ಶಾಲೆಗೆ ಥ್ಯಾಂಕ್ಸ್ ಹೇಳಿದ ಫ್ಯಾನ್ಸ್!