ನೀವು ಮಾಡುವ ಆಹಾರದಲ್ಲಿ ಬಡವರಿಗೂ ಒಂದು ತುತ್ತು ನೀಡಿ: ದರ್ಶನ್ ಮನವಿ

Webdunia
ಶನಿವಾರ, 28 ಮಾರ್ಚ್ 2020 (09:38 IST)
ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಬಡವರಿಗೆ ಒಪ್ಪೊತ್ತಿನ ಊಟಕ್ಕೂ ಗತಿಯಿಲ್ಲದಂತಾಗಿದೆ. ಹೀಗಾಗಿ ಬಡವರಿಗೆ ನೆರವಾಗಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ದರ್ಶನ್, ‘ಈ ಸಮಯದಲ್ಲಿ ನಾನು ಸಣ್ಣದೊಂದು ಸಲಹೆ ನೀಡಲು ಬಯಸುತ್ತೇನೆ. ದಿನನಿತ್ಯ ನೀವು ಮಾಡುವ ಅಡುಗೆಯಲ್ಲಿ ಸ್ವಲ್ಪ ಹೆಚ್ಚು ಜನರಿಗಾಗುವಂತೆ ಮಾಡಿ ನಿಮ್ಮ ಅಕ್ಕಪಕ್ಕದ ಬಡಜನರಿಗೆ ಒಪ್ಪೊತ್ತು ಕೂಳಿಗಾದರೂ ನೆರವಾದರೆ ಒಳಿತು ಎಂಬುದು ನನ್ನ ಭಾವನೆ. ಸಾಧ‍್ಯವಾದಷ್ಟು ನಿಮ್ಮ ಕೈಲಾಗುವ ಈ ಕೆಲಸದಿಂದ ಅನೇಕ ಕುಟುಂಬಗಳು ಚೇತರಿಸಿಕೊಳ್ಳಬಹುದು. ಒಟ್ಟಿಗೆ ಕೊರೋನಾವೈರಸ್ ವಿರುದ್ಧ ಹೋರಾಡೋಣ’ ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ದರ್ಶನ್ ಅಭಿಮಾನಿ ಬಳಗ ಮೈಸೂರಿನಲ್ಲಿ ಬಡಕುಟುಂಬಗಳಿಗೆ ಅನ್ನದಾನ ಮಾಡುವ ಕೆಲಸ ಮಾಡುತ್ತಿದ್ದಾರೆ. ಅದರ ಜತೆಗೆ ದರ್ಶನ್ ಅಭಿಮಾನಿಗಳಿಗೂ ಖುದ್ದಾಗಿ ಈ ರೀತಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಮುಂದಿನ ಸುದ್ದಿ
Show comments